ವಿದ್ಯಾನಗರ ರೈಲು ನಿಲ್ದಾಣದಲ್ಲಿ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
Railway Police crack a robbery case at Vidyanagar Railway Station in Shivamogga, arresting two accused involved in an attack on passengers aboard the Shivamogga–Yeshwantpur Express.
ಶಿವಮೊಗ್ಗ: ನಗರದ ಮಹಾದೇವಿ ಟಾಕೀಸ್ ಸಮೀಪದ ವಿದ್ಯಾನಗರ ರೈಲು ನಿಲ್ದಾಣದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ರೈಲ್ವೆ ಪೊಲೀಸರು ತ್ವರಿತವಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಫೆಬ್ರವರಿ 10ರಂದು ವಿದ್ಯಾನಗರ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿತ್ತು. ದರೋಡೆ ಕುರಿತು ಪೀಡಿತರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ರೈಲ್ವೆ ಇಲಾಖೆಯ ನೆರವಿನ ಆ್ಯಪ್ನಲ್ಲಿ ತಮ್ಮ ಅನುಭವ ಹಂಚಿಕೊಂಡ ಬಳಿಕ ಪ್ರಕರಣ ಮಾಧ್ಯಮಗಳ ಗಮನಕ್ಕೆ ಬಂದಿದೆ.
ಆ ದಿನ ಶಿವಮೊಗ್ಗ (SME) ಹಾಲ್ಟ್ ನಿಲ್ದಾಣದಲ್ಲಿ 16582 ಶಿವಮೊಗ್ಗ–ಯಶವಂತಪುರ ಎಕ್ಸ್ಪ್ರೆಸ್ ರೈಲು ನಿಂತಿದ್ದ ವೇಳೆ, ಆಗಂತುಕನೊಬ್ಬ ರೈಲಿನ ಬೋಗಿಯೊಳಗೆ ನುಗ್ಗಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ, ಒಬ್ಬರಿಂದ ದರೋಡೆ ಮಾಡಿ ಪರಾರಿಯಾಗಿದ್ದರು.
ಪ್ರಕರಣದ ತನಿಖೆಯನ್ನು ರೈಲ್ವೆ ರಕ್ಷಣಾ ಪಡೆ (RPF) ಕಮಾಂಡರ್ ಬಿ.ಕೆ. ಪ್ರಕಾಶ ಹಾಗೂ ಸರ್ಕಾರಿ ರೈಲ್ವೆ ಪೊಲೀಸ್ (GRP) ಸಬ್-ಇನ್ಸ್ಪೆಕ್ಟರ್ ಮಹೇಶ್ ನೇತೃತ್ವದ ತಂಡ ಕೈಗೊಂಡಿದ್ದು, ಶೀಘ್ರದಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…
ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…
ರಿಪ್ಪನ್ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…
ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…