ವಿದ್ಯಾನಗರ ರೈಲು ನಿಲ್ದಾಣದಲ್ಲಿ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
Railway Police crack a robbery case at Vidyanagar Railway Station in Shivamogga, arresting two accused involved in an attack on passengers aboard the Shivamogga–Yeshwantpur Express.
ಶಿವಮೊಗ್ಗ: ನಗರದ ಮಹಾದೇವಿ ಟಾಕೀಸ್ ಸಮೀಪದ ವಿದ್ಯಾನಗರ ರೈಲು ನಿಲ್ದಾಣದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ರೈಲ್ವೆ ಪೊಲೀಸರು ತ್ವರಿತವಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಫೆಬ್ರವರಿ 10ರಂದು ವಿದ್ಯಾನಗರ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿತ್ತು. ದರೋಡೆ ಕುರಿತು ಪೀಡಿತರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ರೈಲ್ವೆ ಇಲಾಖೆಯ ನೆರವಿನ ಆ್ಯಪ್ನಲ್ಲಿ ತಮ್ಮ ಅನುಭವ ಹಂಚಿಕೊಂಡ ಬಳಿಕ ಪ್ರಕರಣ ಮಾಧ್ಯಮಗಳ ಗಮನಕ್ಕೆ ಬಂದಿದೆ.
ಆ ದಿನ ಶಿವಮೊಗ್ಗ (SME) ಹಾಲ್ಟ್ ನಿಲ್ದಾಣದಲ್ಲಿ 16582 ಶಿವಮೊಗ್ಗ–ಯಶವಂತಪುರ ಎಕ್ಸ್ಪ್ರೆಸ್ ರೈಲು ನಿಂತಿದ್ದ ವೇಳೆ, ಆಗಂತುಕನೊಬ್ಬ ರೈಲಿನ ಬೋಗಿಯೊಳಗೆ ನುಗ್ಗಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ, ಒಬ್ಬರಿಂದ ದರೋಡೆ ಮಾಡಿ ಪರಾರಿಯಾಗಿದ್ದರು.
ಪ್ರಕರಣದ ತನಿಖೆಯನ್ನು ರೈಲ್ವೆ ರಕ್ಷಣಾ ಪಡೆ (RPF) ಕಮಾಂಡರ್ ಬಿ.ಕೆ. ಪ್ರಕಾಶ ಹಾಗೂ ಸರ್ಕಾರಿ ರೈಲ್ವೆ ಪೊಲೀಸ್ (GRP) ಸಬ್-ಇನ್ಸ್ಪೆಕ್ಟರ್ ಮಹೇಶ್ ನೇತೃತ್ವದ ತಂಡ ಕೈಗೊಂಡಿದ್ದು, ಶೀಘ್ರದಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…