Headlines

ವಿದ್ಯಾನಗರ ರೈಲು ನಿಲ್ದಾಣದಲ್ಲಿ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ವಿದ್ಯಾನಗರ ರೈಲು ನಿಲ್ದಾಣದಲ್ಲಿ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

Railway Police crack a robbery case at Vidyanagar Railway Station in Shivamogga, arresting two accused involved in an attack on passengers aboard the Shivamogga–Yeshwantpur Express.

ಶಿವಮೊಗ್ಗ: ನಗರದ ಮಹಾದೇವಿ ಟಾಕೀಸ್ ಸಮೀಪದ ವಿದ್ಯಾನಗರ ರೈಲು ನಿಲ್ದಾಣದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ರೈಲ್ವೆ ಪೊಲೀಸರು ತ್ವರಿತವಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಫೆಬ್ರವರಿ 10ರಂದು ವಿದ್ಯಾನಗರ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿತ್ತು. ದರೋಡೆ ಕುರಿತು ಪೀಡಿತರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ರೈಲ್ವೆ ಇಲಾಖೆಯ ನೆರವಿನ ಆ್ಯಪ್‌ನಲ್ಲಿ ತಮ್ಮ ಅನುಭವ ಹಂಚಿಕೊಂಡ ಬಳಿಕ ಪ್ರಕರಣ ಮಾಧ್ಯಮಗಳ ಗಮನಕ್ಕೆ ಬಂದಿದೆ.

ಆ ದಿನ ಶಿವಮೊಗ್ಗ (SME) ಹಾಲ್ಟ್ ನಿಲ್ದಾಣದಲ್ಲಿ 16582 ಶಿವಮೊಗ್ಗ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ವೇಳೆ, ಆಗಂತುಕನೊಬ್ಬ ರೈಲಿನ ಬೋಗಿಯೊಳಗೆ ನುಗ್ಗಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ, ಒಬ್ಬರಿಂದ ದರೋಡೆ ಮಾಡಿ ಪರಾರಿಯಾಗಿದ್ದರು.

ಪ್ರಕರಣದ ತನಿಖೆಯನ್ನು ರೈಲ್ವೆ ರಕ್ಷಣಾ ಪಡೆ (RPF) ಕಮಾಂಡರ್ ಬಿ.ಕೆ. ಪ್ರಕಾಶ ಹಾಗೂ ಸರ್ಕಾರಿ ರೈಲ್ವೆ ಪೊಲೀಸ್ (GRP) ಸಬ್-ಇನ್ಸ್‌ಪೆಕ್ಟರ್ ಮಹೇಶ್ ನೇತೃತ್ವದ ತಂಡ ಕೈಗೊಂಡಿದ್ದು, ಶೀಘ್ರದಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

About The Author