ASI Halappa of Ripponpet Police Station receives appreciation letter for maintaining law and order during Ganapati and Eid Milad processions in Thirthahalli subdivision of Shivamogga district.
ರಿಪ್ಪನ್ಪೇಟೆ : 2025ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ತೋರಿದ ಎಚ್ಚರಿಕೆ ಮತ್ತು ಜವಾಬ್ದಾರಿತನಕ್ಕಾಗಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಎಎಸ್ಐ ಹಾಲಪ್ಪ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ.
ಗುಪ್ತ ಮಾಹಿತಿಯ ಸಂಗ್ರಹಣೆ, ರೌಡಿಶೀಟರ್ಗಳ ಮೇಲೆ ನಿಗಾವಹಿಸುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೈಗೊಂಡ ಕ್ರಮಗಳು ಶ್ಲಾಘನೀಯವಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಹಾಲಪ್ಪ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಪ್ರಶಂಸಿಸಲಾಗಿದೆ.
ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾದ ರವಿಕಾಂತೇ ಗೌಡ ಅವರು ಈ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದ್ದು, ಅದನ್ನು ಪಟ್ಟಣದ ಪಿಎಸ್ಐ ರಾಜು ರೆಡ್ಡಿ ಅವರು ಹಾಲಪ್ಪ ಅವರಿಗೆ ವಿತರಿಸಿದರು.
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…