ಖೋಖೋ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವಕ ಆಸೀಮ್ ನಿಧನ

Asim, a talented Kho-Kho player and coach from Vinayaka Nagar in Ripponpet, passed away after complications following an appendix surgery at Meggan Hospital, Shivamogga. His demise has shocked the local sports community.

ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ನಗರ ನಿವಾಸಿ ಹಾಗೂ ಖೋಖೋ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಪ್ರತಿಭಾವಂತ ಆಟಗಾರ ಮತ್ತು ಯುವ ಕ್ರೀಡಾಪಟುಗಳ ನೆಚ್ಚಿನ ತರಬೇತುದಾರ ಆಸೀಮ್ ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ‌

ನಾಲ್ಕು ದಿನಗಳ ಹಿಂದೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ ಶಸ್ತ್ರಚಿಕಿತ್ಸೆಯ ನಂತರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕಳೆದ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಅಪ್ರತಿಮ ಖೋಖೋ ಆಟಗಾರನಾಗಿ ಹೆಸರು ಮಾಡಿದ್ದ ಆಸೀಮ್ ಅವರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದರು. ತಮ್ಮ ಕ್ರೀಡಾ ಜೀವನದಲ್ಲಿ ಅನೇಕ ಬಾರಿ ಉತ್ತಮ ಪ್ರದರ್ಶನ ನೀಡುವ ಮೂಲಕ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದ್ದರು.

ಕ್ರೀಡಾಪಟುವಾಗಿ ಮೆರೆದ ನಂತರವೂ ಅವರು ಕ್ರೀಡೆಗೆ ಇರುವ ಆಸಕ್ತಿ ಹಾಗೂ ನಿಷ್ಠೆಯನ್ನು ಮುಂದುವರೆಸಿದರು. ಕಳೆದ ಸುಮಾರು ಹತ್ತು ವರ್ಷಗಳಿಂದ ರಿಪ್ಪನ್‌ಪೇಟೆಯ ಸರ್ಕಾರಿ ಹೈಸ್ಕೂಲ್ ಹಾಗೂ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಖೋಖೋ ತರಬೇತಿ ನೀಡುತ್ತಿದ್ದರು. ಅವರ ಮಾರ್ಗದರ್ಶನದಲ್ಲಿ ಅನೇಕ ಕ್ರೀಡಾಪಟುಗಳು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದರು. ಕ್ರೀಡಾಪಟುಗಳ ನೆಚ್ಚಿನ ತರಬೇತುದಾರರಾಗಿದ್ದ ಅವರು ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಮೂಲಕ ತಂಡಗಳನ್ನು ಉತ್ತಮವಾಗಿ ತರಬೇತುಗೊಳಿಸುತ್ತಿದ್ದರು.

ಆಸೀಮ್ ಅವರ ಅಕಾಲಿಕ ನಿಧನದಿಂದ ಕುಟುಂಬದವರಿಗೆ ಮಾತ್ರವಲ್ಲದೆ ಕ್ರೀಡಾ ವಲಯಕ್ಕೂ ಅಪಾರ ನಷ್ಟ ಉಂಟಾಗಿದೆ. ಮೃತರು ಪತ್ನಿ ಹಾಗೂ ಐದು ವರ್ಷದ ಪುತ್ರನನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಪಟ್ಟಣದ ಸಾಗರ ರಸ್ತೆಯ ಖಬರ್ ಸ್ಥಾನ್ ನಲ್ಲಿ ನೆರವೇರಿತು

ಅತ್ಯುತ್ತಮ ಖೋಖೋ ಕ್ರೀಡಾಪಟುವಾಗಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಬಳಿಕ ಯಾವುದೇ ಪ್ರತಿಫಲಾಕಾಂಕ್ಷೆ ಇಲ್ಲದೆ ಹತ್ತು ವರ್ಷಕ್ಕೂ ಹೆಚ್ಚು ಕಾಲ ಯುವ ಕ್ರೀಡಾಪಟುಗಳಿಗೆ ತರಬೇತಿ ನೀಡಿದ ಅವರ ಸೇವೆ ಸದಾ ಸ್ಮರಣೀಯವಾಗಿದೆ.

ಆಸೀಮ್ ಅವರ ಅಕಾಲಿಕ ನಿಧನಕ್ಕೆ ಕ್ರೀಡಾಪಟುಗಳು, ಸ್ನೇಹಿತರು ಹಾಗೂ ಸಾರ್ವಜನಿಕರು ಆಳವಾದ ಸಂತಾಪ ಸೂಚಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ಬಳಗವೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬದವರಿಗೆ ಸಂತಾಪ ಸೂಚಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

20 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago