Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year.
ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ.
ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದರು. 2025ರ ಮಾರ್ಚ್ 20 ರಂದು ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದ ಇವರು, ಮಾರ್ಚ್ 24 ರಂದು ವಾಪಸ್ ಬಂದಾಗ ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆಯಾಗಿರುವುದು ಕಂಡುಬಂದಿದೆ.
ಆಟೋ ನಾಪತ್ತೆಯಾದಾಗ, ಅದನ್ನು ತನ್ನ ಅಳಿಯನೇ ತೆಗೆದುಕೊಂಡು ಹೋಗಿರಬಹುದು ಎಂದು ದೂರು ಭಾವಿಸಿದ್ದರು. ಇದೇ ಕಾರಣಕ್ಕೆ ಅವರು ಆರಂಭದಲ್ಲಿ ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ, ದಿನ ಕಳೆದಂತೆ ಆಟೋದ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಮತ್ತು ಅಳಿಯನೂ ಅದನ್ನು ಒಯ್ದಿಲ್ಲ ಎಂಬುದು ಖಚಿತವಾದ ನಂತರ ಈಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಕಳುವಾದ ಆಟೋದ ಅಂದಾಜು ಮೌಲ್ಯ 2,44,000 ರೂಪಾಯಿ ಎಂದು ತಿಳಿದುಬಂದಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್