Heavy rain and strong winds in Belluru village of Hosanagara taluk caused a coconut tree to fall on a house. Five family members inside the house escaped without injuries though the house suffered damage.
ರಿಪ್ಪನ್ಪೇಟೆ: ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆ ಮೇಲೆಗೆ ತೆಂಗಿನ ಮರ ಬಿದ್ದು ಆತಂಕದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಐವರು ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳ್ಳೂರು ಗ್ರಾಮದ ನಿವಾಸಿ ರತ್ನಮ್ಮ ಅವರಿಗೆ ಸೇರಿದ ಹಂಚಿನ ಮನೆ ಮುಂದೆ ನಿಂತಿದ್ದ ದೊಡ್ಡ ತೆಂಗಿನ ಮರ ಮಳೆ ಹಾಗೂ ಗಾಳಿಯ ತೀವ್ರತೆಗೆ ತಾಳಲಾರದೆ ಏಕಾಏಕಿ ಮನೆ ಮೇಲೆ ಬಿದ್ದಿದೆ. ಘಟನೆ ನಡೆದ ವೇಳೆ ಮನೆಯೊಳಗೆ ಕುಟುಂಬದ ಐವರು ಸದಸ್ಯರು ಇದ್ದರು. ಮರ ಬಿದ್ದ ಶಬ್ದ ಕೇಳಿ ಅವರು ತಕ್ಷಣ ಹೊರಗೆ ಓಡಿಬಂದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮರ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿಗೆ ಹಾನಿಯಾಗಿದ್ದು, ಹಂಚುಗಳು ಜಾರಿಬಿದ್ದಿವೆ. ಇದರ ಪರಿಣಾಮವಾಗಿ ಬಳಿಕ ಮುಂದುವರಿದ ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ಒಳಗಿನ ಸಾಮಾನುಗಳಿಗೆ ಹಾನಿಯಾಗಿದೆ. ಮನೆಯ ಕೆಲವು ಭಾಗಗಳು ಭಾಗಶಃ ಹಾನಿಗೊಳಗಾಗಿರುವುದರಿಂದ ಕುಟುಂಬಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್