ಭಾರಿ ಮಳೆ–ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಶಾಸಕರಿಂದ ವೈಯಕ್ತಿಕ ಪರಿಹಾರ

A coconut tree fell on a house in Belluru village of Hosanagara taluk due to heavy rain and strong winds. Tahsildar Bharat Raj inspected the spot, and MLA Belur Gopalakrishna’s aide Sinnakki Manju provided personal compensation to the affected family.

ಹೊಸನಗರ: ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆಯ ಮೇಲೆ ತೆಂಗಿನ ಮರ ಬಿದ್ದ ಘಟನೆ ಸಂಭವಿಸಿದೆ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೂಚನೆ ಮೇರೆಗೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಘಟನೆಯಲ್ಲಿ ಅದೃಷ್ಟವಶಾತ್ ಮನೆಯಲ್ಲಿದ್ದ ಐವರು ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳ್ಳೂರು ಗ್ರಾಮದ ನಿವಾಸಿ ರತ್ನಮ್ಮ ಅವರಿಗೆ ಸೇರಿದ ಹಂಚಿನ ಮನೆಯ ಮುಂದೆ ನಿಂತಿದ್ದ ದೊಡ್ಡ ತೆಂಗಿನ ಮರ ಭಾರಿ ಮಳೆ ಹಾಗೂ ಗಾಳಿಯ ತೀವ್ರತೆಗೆ ತಾಳಲಾರದೆ ಏಕಾಏಕಿ ಮನೆ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಮನೆಯ ಮೇಲ್ಛಾವಣಿಗೆ ಹಾನಿಯಾಗಿದ್ದು, ಹಂಚುಗಳು ಜಾರಿಬಿದ್ದಿವೆ. ನಂತರವೂ ಮಳೆ ಮುಂದುವರಿದ ಪರಿಣಾಮ ಮನೆಯೊಳಗೆ ನೀರು ನುಗ್ಗಿ ಒಳಗಿದ್ದ ಗೃಹೋಪಯೋಗಿ ಸಾಮಾನುಗಳಿಗೆ ಹಾನಿಯಾಗಿದೆ. ಮನೆಯ ಕೆಲವು ಭಾಗಗಳು ಭಾಗಶಃ ಹಾನಿಗೊಳಗಾಗಿರುವುದರಿಂದ ಕುಟುಂಬಸ್ಥರು ಆತಂಕದಲ್ಲಿ ಕಾಲಕಳೆಯುವಂತಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ತಹಶೀಲ್ದಾರ್ ಭರತ್ ರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ವತಿಯಿಂದ ಅಗತ್ಯ ಪರಿಹಾರ ದೊರಕಿಸುವ ಭರವಸೆ ನೀಡಿದರು. ಇದೇ ವೇಳೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಪರವಾಗಿ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಅವರು ರತ್ನಮ್ಮ ಅವರಿಗೆ ವೈಯಕ್ತಿಕ ಪರಿಹಾರವನ್ನು ವಿತರಿಸಿದರು.

ಈ ಸಂಧರ್ಭದಲ್ಲಿ ರಾಜಸ್ವ ನಿರೀಕ್ಷಕ ಅಪ್ರೋಜ್ ಅಹಮದ್ , ಗ್ರಾಮ ಲೆಕ್ಕಿಗ ಜಾಕೀರ್ , ಪ್ರಮುಖರಾದ ಯೋಗೇಶ್ ಬೆಳ್ಳೂರು ಹಾಗೂ ಇನ್ನಿತರರು ಇದ್ದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

17 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

17 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

17 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

23 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

23 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

1 day ago