BMS ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಕೋಡೂರಿನ ಸಂಜನಾ ಎಸ್ ರಾವ್‌ – 5 ಚಿನ್ನದ ಪದಕ ಬಾಚಿಕೊಂಡ ಗ್ರಾಮೀಣ ಪ್ರತಿಭೆ

Dr. Sanjana S Rao from Koduru village in Hosanagara taluk secured State First Rank in BAMS under RGUHS and won 5 gold medals for outstanding academic performance.

ಹೊಸನಗರ: ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ಡಾ. ಸಂಜನಾ ಎಸ್ ರಾವ್ ಅವರು ಬಿಎಎಂಎಸ್ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.

ಕೊಪ್ಪ (ಚಿಕ್ಕಮಗಳೂರು)ದಲ್ಲಿರುವ ಆರೂರು ಲಕ್ಷ್ಮಿನಾರಾಯಣ ರಾವ್ ಸ್ಮಾರಕ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾಗಿರುವ ಸಂಜನಾ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿ ನಡೆದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ. ವಿವಿಧ ವಿಷಯಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಒಟ್ಟು ಐದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮೌಲಿಕ ಸಿದ್ಧಾಂತ ಮತ್ತು ಅಷ್ಟಾಂಗ ಹೃದಯ, ಚರಕ ಪೂರ್ವಾರ್ಧ ಹಾಗೂ ಶಲ್ಯತಂತ್ರ ವಿಷಯಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದಿರುವ ಅವರು, ಕ್ರಿಯಾ ಶಾರೀರದಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ. ಸಂಸ್ಕೃತದಲ್ಲಿ ನಾಲ್ಕನೇ ರ‍್ಯಾಂಕ್, ದ್ರವ್ಯಗುಣಂನಲ್ಲಿ ಆರನೇ ರ‍್ಯಾಂಕ್ ಹಾಗೂ ರೋಗನಿದಾನ ಮತ್ತು ವಿಕೃತಿ ವಿಜ್ಞಾನದಲ್ಲಿ ಏಳನೇ ರ‍್ಯಾಂಕ್ ಗಳಿಸಿದ್ದಾರೆ.

ಶಶಿಧರ ಎಸ್ ರಾವ್ ಹಾಗೂ ದೀಪಾ ಎಸ್ ರಾವ್ ದಂಪತಿಗಳ ಪುತ್ರಿಯಾದ ಸಂಜನಾ, ಗ್ರಾಮೀಣ ಹಿನ್ನೆಲೆಯಿಂದ ಬಂದಿದ್ದರೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ಊರು ಮತ್ತು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಸಂಜನಾ ಅವರ ಸಾಧನೆಯನ್ನು ಕೋಡೂರು ಗ್ರಾಮದವರೇ ಆದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಚಂದ್ರಮೌಳಿ ದಂಪತಿಗಳು ಅಭಿನಂದಿಸಿದ್ದಾರೆ.

ಡಾ. ಸಂಜನಾ ಎಸ್ ರಾವ್ ಅವರ ಈ ಅಪೂರ್ವ ಸಾಧನೆಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ವತಿಯಿಂದ ಹಾರ್ದಿಕ ಅಭಿನಂದನೆಗಳು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

55 minutes ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

2 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

2 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

19 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

23 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

23 hours ago