A bike rider was seriously injured after a collision between a car and a motorcycle near Garthikere College in Ripponpet. The injured person was rushed to the hospital with the help of Anandapura PSI.
ರಿಪ್ಪನ್ಪೇಟೆ: ಪಟ್ಟಣದ ಸಮೀಪದ ಗರ್ತಿಕೆರೆ ಕಾಲೇಜು ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗರ್ತಿಕೆರೆ ಸಮೀಪದ ಹೊಳೆಕೇವಿ ಗ್ರಾಮದ ನಿವಾಸಿ ರಾಜು ಗಾಯಗೊಂಡ ವ್ಯಕ್ತಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅವರು ಬೈಕ್ನಲ್ಲಿ ಸಾಗುತ್ತಿದ್ದ ವೇಳೆ ಎದುರು ದಿಕ್ಕಿನಿಂದ ಬರುತ್ತಿದ್ದ ಸಾಗರ ಮೂಲದ ಕ್ರೇಟಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ರಾಜು ರಸ್ತೆ ಮೇಲೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿದ್ದು, ಸ್ಥಳದಲ್ಲೇ ಆತಂಕದ ವಾತಾವರಣ ನಿರ್ಮಾಣವಾಯಿತು. ಅಪಘಾತದ ಸುದ್ದಿ ತಿಳಿದು ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿ ಗಾಯಾಳುವಿನ ರಕ್ಷಣೆಗೆ ಮುಂದಾದರು.
ಈ ಸಂದರ್ಭದಲ್ಲಿ ಕಾರ್ಯನಿಮಿತ್ತ ತೀರ್ಥಹಳ್ಳಿಗೆ ತೆರಳಿ ಹಿಂದಿರುಗುತ್ತಿದ್ದ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಎಸ್.ಪಿ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವಿನ ಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಸಮಯ ಪ್ರಜ್ಞೆ ತೋರಿದ ಅವರು ಗಾಯಾಳುವನ್ನು ಸಮಾಧಾನಪಡಿಸಿ ತಕ್ಷಣವೇ ಖಾಸಗಿ ವಾಹನದ ಮೂಲಕ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ತಲೆಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನೆಯ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…