Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities.
ರಿಪ್ಪನ್ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ ತೊಡಗಿ ಹಬ್ಬದ ಸಡಗರವನ್ನು ಹಂಚಿಕೊಂಡರು.
ಮಂಗಳವಾರ ರಾತ್ರಿ ಗಾಂಧಿನಗರದ ಯುವಕರು ವಿನಾಯಕ ವೃತ್ತದಲ್ಲಿ ಕಾಮಣ್ಣನ ಪ್ರತಿಕೃತಿಯನ್ನು ದಹಿಸುವ ಮೂಲಕ ಹೋಳಿ ಹಬ್ಬಕ್ಕೆ ಅಧಿಕೃತ ಚಾಲನೆ ನೀಡಿದರು. ಪ್ರಮುಖ ಗಲ್ಲಿಗಳಲ್ಲಿ ಯುವಕರು ಕಟ್ಟಿಗೆ ಹಾಗೂ ಸಗಣಿ ಕುಳ್ಳನ್ನು ಸಂಗ್ರಹಿಸಿ ಕಾಮನ ಪ್ರತಿಕೃತಿಯನ್ನು ದಹಿಸಿ ಬೊಬ್ಬೆ ಹಾಕುತ್ತಾ ಹೋಳಿ ಸಂಭ್ರಮವನ್ನು ಹೆಚ್ಚಿಸಿದರು.
ಬುಧವಾರ ಬೆಳಗ್ಗಿನಿಂದಲೇ ವಿನಾಯಕ ವೃತ್ತ ಸೇರಿದಂತೆ ಹಲವು ಬಡಾವಣೆಗಳಲ್ಲಿ ಯುವಕರ ತಂಡಗಳು ಬಣ್ಣಗಳನ್ನು ಪರಸ್ಪರ ಎರಚಿಕೊಂಡು ಓಕುಳಿ ಆಡಿದವು. ಎಲ್ಲೆಡೆ ಬಣ್ಣದ ಹಬ್ಬದ ಕಳೆ ಕಾಣಿಸಿಕೊಂಡಿದ್ದು, ಹೋಳಿ ಸಂಭ್ರಮ ಪಟ್ಟಣವನ್ನೇ ರಂಗಿನಮಯಗೊಳಿಸಿತು.
ಕಾಮದಹನ ವೇಳೆಯಲ್ಲಿ ನಿರೂಪ್ ಕುಮಾರ್ , ರಾಮಚಂದ್ರ ಬಳೇಗಾರ್ , ನಾಗರಾಜ್ , ಪ್ರವೀಣ್ ಆಚಾರ್ , ಸಂದೇಶ್ ಆಚಾರ್ , ಬಾಲರಾಜ್ , ಆನಂದ್ ಹಾಗೂ ಇನ್ನಿತರರು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್