ಹೊಂಬುಜ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ – ಮೂವರು ವಿದ್ಯಾರ್ಥಿಗಳು ಆಯ್ಕೆ

Three students selected for Navodaya Vidyalaya after attending the free coaching camp organized by Hombuja Navodaya and Morarji training center, marking a proud achievement for the institution.

ರಿಪ್ಪನ್ ಪೇಟೆ : ಇಲ್ಲಿನ ಹೊಂಬುಜದಲ್ಲಿ ಪ್ರತೀವರ್ಷದಂತೆ ಈ ವರ್ಷವೂ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗ ಸಂಸ್ಥೆಯಿಂದ ನಡೆದ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷಾ ಉಚಿತ ತರಬೇತಿ ಶಿಬಿರದಿಂದ ತಾಲ್ಲೂಕಿನ ಮೂವರು ಮಕ್ಕಳು ಗಾಜನೂರಿನ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.

ಹೊಂಬುಜದಲ್ಲಿ ನಡೆದ ಶಿಬಿರದಲ್ಲಿ ತರಬೇತಿ ಪಡೆದಿದ್ದ ಸುಧನ್ವ ಎಸ್, ಆರಾಧ್ಯ ಕೆ ಪಿ, ಹಾಗೂ ಮೈತ್ರಿ ಎಸ್. ಎನ್ 6ನೇ ತರಗತಿಯ ಪ್ರವೇಶಕ್ಕೆ ನವೋದಯ ಪರೀಕ್ಷೆಯನ್ನು ಬರೆದಿದ್ದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಉಚಿತ ಶಿಬಿರದ ಪ್ರಯೋಜನ ಪಡೆದುಕೊಂಡು ನವೋದಯ ಶಾಲೆಗೆ ಪ್ರವೇಶ ಪಡೆದಿರುವ ಮಕ್ಕಳನ್ನು ಅಭಿನಂದಿಸಿ ಮಾತನಾಡಿದ ಈ ಶಿಬಿರದ ಸಂಸ್ಥಾಪಕರಾದ, ಹಳೆ ನವೋದಯ ವಿದ್ಯಾರ್ಥಿಯಾದ ಪ್ರಕಾಶ್ ಜೋಯ್ಸ್ ಅವರು, ಈ ಶಿಬಿರ, ಕರ್ನಾಟಕ ರಾಜ್ಯದಲ್ಲಿ ಮೊದಲ ನೂತನ ಪ್ರಯೋಗವಾಗಿದ್ದು, ಉತ್ತಮ ಶಿಕ್ಷಣ ಬಯಸುವ ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಸಿಗುವ ಸೌಲಭ್ಯ ಕಲ್ಪಿಸುವ ಒಂದು ವೇದಿಕೆಯಾಗಿದೆ. ಈ ಯಶಸ್ಸಿಗೆ ಕಾರಣೀಕರ್ತರಾದ ಶಿಬಿರದ ಶಿಕ್ಷಕ ವೃಂದಕ್ಕೆ, ಸಂಚಾಲಕರಿಗೆ, ಪೋಷಕರಿಗೆ ಮತ್ತು ಮಕ್ಕಳಿಗೆ ಶುಭಾಶಯ ತಿಳಿಸುವುದಾಗಿ ಹೇಳಿದರು.

ಜೊತೆಗೆ ಈ ಮಕ್ಕಳ ಯಶಸ್ಸು, ಸಾಧನೆಯನ್ನು, ಶಿಬಿರದ ಪ್ರತಿ ಕಾರ್ಯದ ಜೊತೆಗೆ ನಿಂತು, ಎಲ್ಲರನ್ನು ಪ್ರೇರೇಪಿಸಿ, ಆಶೀರ್ವದಿಸಿದ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಚರಣಕ್ಕೆ ಸಮರ್ಪಿಸುವುದಾಗಿ ತಿಳಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

9 hours ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

1 day ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

1 day ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

1 day ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

1 day ago