ಹೋಂ ಗಾರ್ಡ್ ಮೇಲೆ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಜಿಲ್ಲಾ ಆದಿವಾಸಿ ಸಂಘ ಆಗ್ರಹ

ಹೋಂ ಗಾರ್ಡ್ ಮೇಲಿನ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಆಗ್ರಹ

ಮೇಲಾಧಿಕಾರಿ ಮೇಲೆ ಎಫ್ಐಆರ್ ಹಾಕಲು ವೀಡಿಯೋ ಸಾಕ್ಷ್ಯ ಬೇಕಂತೆ!? ಪೊಲೀಸರ ನಿರ್ಲಕ್ಷ್ಯಕ್ಕೆ ಆಕ್ರೋಶ !

Allegation of physical assault on a Home Guard from the ST community by Shivamogga District Home Guards Commandant. Tribal Welfare Association demands legal action and justice.

ಶಿವಮೊಗ್ಗ: ಕರ್ತವ್ಯ ನಿರ್ವಹಿಸುತ್ತಿದ್ದ ಆದಿವಾಸಿ ಹಸಲರು (ಎಸ್‌ಟಿ) ಸಮುದಾಯಕ್ಕೆ ಸೇರಿದ ಹೋಂ ಗಾರ್ಡ್ ಮೇಲೆ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ದೈಹಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಆರೋಪಿತ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಆದಿವಾಸಿ ಹಸಲರು ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.

ಈ ಕುರಿತು ಹೊಸನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಎಂ.ಸಿ. ಮಲ್ಲೇಶಪ್ಪ ಮಾತನಾಡಿ ಹೊಸನಗರ ತಾಲೂಕಿನ ಮಹೇಶ್ವರಪ್ಪ ಎನ್. (ಮದಕರಿ) ಅವರು ಕಳೆದ ಸುಮಾರು 15 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳದಲ್ಲಿ ಹೋಂ ಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ದಿನಾಂಕ 06-03-2026 ರಂದು ಮಹೇಶ್ವರಪ್ಪ ಅವರನ್ನು ಕರ್ತವ್ಯ ಸಂಬಂಧ ಶಿವಮೊಗ್ಗಕ್ಕೆ ಕರೆಯಿಸಿಕೊಂಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಚೇತನ್ ಕುಮಾರ್ ಅವರು ಮಾತಿನ ಸಂದರ್ಭದಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೆನ್ನೆ ಹಾಗೂ ಕಿವಿ ಭಾಗಕ್ಕೆ ಬಲವಾಗಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದ್ದು ಹಲ್ಲೆಯಿಂದಾಗಿ ಮಹೇಶ್ವರಪ್ಪ ಅವರಿಗೆ ದೇಹದಲ್ಲಿ ರಕ್ತದೊತ್ತಡ ಏರುಪೇರಾಗಿ ಆರೋಗ್ಯ ಸಮಸ್ಯೆ ಉಂಟಾಗಿ ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ನಂತರ ಪ್ರಕರಣ ಸಂಬಂಧ ಹೆಚ್‌ಎಂಆರ್ ಅನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದರ ನಡುವೆಯೇ ಪೊಲೀಸರು ಆಸ್ಪತ್ರೆಗೆ ಬಂದು ಮಹೇಶ್ವರಪ್ಪ ಅವರ ಹೇಳಿಕೆ ಪಡೆದುಕೊಂಡಿದ್ದು, ಬಳಿಕ ಮೇಲಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಆದರೆ ಮೇಲಾಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ವೀಡಿಯೋ ಸಾಕ್ಷ್ಯ ಬೇಕು ಎಂದು ಹೇಳಿ ಎಫ್‌ಐಆರ್ ದಾಖಲಿಸಲು ಪೊಲೀಸರು ಮುಂದಾಗಿಲ್ಲ ಎಂದು ಮಲ್ಲೇಶಪ್ಪ ಆರೋಪಿಸಿದರು.

ಜಾತಿ ನಿಂದನೆ ಮಾಡಿರುವುದು ಹಾಗೂ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ದೈಹಿಕ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಕಮಾಂಡೆಂಟ್ ಚೇತನ್ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಅವರನ್ನು ಸೇವೆಯಿಂದ ವಜಾಗೊಳಿಸಿ ಆದಿವಾಸಿ ಹಾಗೂ ಹಿಂದುಳಿದ ವರ್ಗದವರಿಗೆ ನ್ಯಾಯ ಒದಗಿಸಬೇಕೆಂದು ಸಂಘದವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಚ್‌.ಡಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್‌.ಎನ್. ಬಸವೇಶ್, ಹೊಸನಗರ ಘಟಕದ ತಾಲೂಕು ಅಧ್ಯಕ್ಷ ಹಿರಿಯೋಗಿ ಯೋಗೇಂದ್ರಪ್ಪ, ಮಳೂರು ದೇವಪ್ಪ, ಹಲ್ಲೆಗೆ ಒಳಗಾದ ಮಹೇಶ್ವರಪ್ಪ ಹಾಗೂ ಅವರ ಪತ್ನಿ ಮತ್ತು ಗೃಹರಕ್ಷಕ ದಳದ ಹೊಸನಗರ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

19 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago