HOSANAGARA | ಮನೆಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ನಾಲ್ವರು ಆರೋಪಿಗಳು ಬಂಧನ

Hosanagar police crack a house burglary case, arrest four accused from Bhatkal and seize gold ornaments worth lakhs, including 387 grams of jewellery and a Tata Etios car. Investigation continues.

ಹೊಸನಗರ: ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ನಗರ ಪಿಎಸೈ ಶಿವಾನಂದ ಕೆ ರವರ ನೇತೃತ್ವದಲ್ಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಇತರೆ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

2025 ಡಿಸೆಂಬರ್ 27ರಂದು ದಾಖಲಾಗಿದ್ದ ಪ್ರಕರಣದಲ್ಲಿ, ಮನೆಯವರು ಹೊರಗಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿಗಳು ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ತನಿಖೆ ಕೈಗೊಂಡು, ತಾಂತ್ರಿಕ ಮಾಹಿತಿ ಹಾಗೂ ಗುಪ್ತಚರರ ಸಹಾಯದಿಂದ ಆರೋಪಿಗಳ ಸುಳಿವು ಪತ್ತೆಹಚ್ಚಿದರು.

ಬಂಧಿತ ಆರೋಪಿಗಳನ್ನು ಮಹಮ್ಮದ್ ಇಮ್ರಾನ್ ಇಕ್ಕೇರಿ (25), ಮಹಮ್ಮದ್ ಅಖೀಲ್ (24), ಅಮೀರ್ ಹಸನ್ ಬ್ಯಾರಿ (29) ಹಾಗೂ ಶ್ರೀಮತಿ ಬೇಬಿ ಹಾಜಿರ (55) ಎಂದು ಗುರುತಿಸಲಾಗಿದೆ. ಇವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಭಾಗದವರು ಎಂದು ತಿಳಿದುಬಂದಿದೆ.

ವಶಪಡಿಸಿಕೊಂಡ ಸ್ವತ್ತುಗಳ ವಿವರ:

30 ಗ್ರಾಂ ತೂಕದ ಬಂಗಾರದ ನೆಕ್ಸಸ್ ಹಾರ – ಅಂದಾಜು ಮೌಲ್ಯ ₹3,87,000 ,06 ಗ್ರಾಂ ತೂಕದ ಬಂಗಾರದ ಬ್ರಾಸ್ ಲೇಟ್ – ಅಂದಾಜು ಮೌಲ್ಯ ₹93,000 ,
50 ಗ್ರಾಂ ಬೆಳ್ಳಿಯ ವಸ್ತುಗಳು – ₹5,000 ,ಮೊಬೈಲ್ ಫೋನ್ – ₹5,000 ,ಕೃತ್ಯಕ್ಕೆ ಬಳಸಿದ ಟಾಟಾ ಇಟಿಯೋಸ್ ಕಾರು – ₹3,00,000 ,ಒಟ್ಟು ಸುಮಾರು ₹7,90,000 ಮೌಲ್ಯದ ಸ್ವತ್ತುಗಳನ್ನು ಅಮಾನತ್ತುಪಡಿಸಲಾಗಿದೆ.

ವಶಪಡಿಸಿಕೊಂಡ ವಸ್ತುಗಳಲ್ಲಿ ಚಿನ್ನದ ಹಾರ, ಬಳೆಗಳು, ಮಾಲೆಗಳು ಹಾಗೂ ಇತರೆ ಆಭರಣಗಳು ಸೇರಿವೆ. ನಗದು ಹಣವನ್ನೂ ಜಪ್ತಿ ಮಾಡಲಾಗಿದೆ.

ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ

ಈ ಕಾರ್ಯಾಚರಣೆ ನಿಖಿಲ್ ಬಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಹಾಗೂ ಕಾರಿಯಪ್ಪ ವಿ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಅವರ ಮಾರ್ಗದರ್ಶನದಲ್ಲಿ ನಡೆಯಿತು. ಜೊತೆಗೆ ರಮೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರವಿಂದ ಎನ್ ಕಲಗುಜ್ಜಿ ಹಾಗೂ ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರಾದ ಎಂ.ಐ ಗೌಡಪ್ಪಗೌಡ ಅವರ ಮೇಲ್ವಿಚಾರಣೆಯಲ್ಲಿ, ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಾನಂದ ಕೋಳಿ ಅವರ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

ತಂಡದಲ್ಲಿ ನೇತೃತ್ವದಲ್ಲಿಸಿಬ್ಬಂದಿಗಳಾದ ಕುಮಾರ್ ಟಿ (ಎ.ಎಸ್.ಐ), ಶೇಖ್ ಅಮೀರ್ ಜಾನ್ (ಎ.ಎಸ್.ಐ), ಕಿರಣ್ ಕುಮಾರ್ ಡಿ.ವೈ., ಗಿರಿಪ್ರಸಾದ್, ವಿಶ್ವನಾಥ್, ಪ್ರವೀಣ್ ಕುಮಾರ್, ಸುಜಯ್ ಕುಮಾರ್, ಪ್ರಜ್ವಲ್, ಸಚಿನ್, ಲಕ್ಷ್ಮಣ, ಅಕ್ಷಯ್ ಮತ್ತು ಮಧುಸೂಧನ್, ಶಿವಕುಮಾರ ನಾಯ್ಕ (ಹೊಸನಗರ ಠಾಣೆ), ರವಿಚಂದ್ರ, ಶಶಿಧರ್ ಹಾಗೂ ನಗರ ಠಾಣೆಯ ಸಿಬ್ಬಂದಿಗಳು, ಜಿಲ್ಲಾ ಎ.ಎನ್.ಸಿ ಸಿಬ್ಬಂದಿಗಳಾದ ಗುರುರಾಜ್ ಮತ್ತು ಇಂದ್ರೇಶ್ ಹಾಗೂ ಜಿಲ್ಲಾ ಬೆರಳಚ್ಚು ವಿಭಾಗದ ಶಿವಮೊಗ್ಗ ಸಿಬ್ಬಂದಿಗಳ ತಾಂತ್ರಿಕ ಸಹಕಾರದೊಂದಿಗೆ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿ, ಕಳುವಾದ ಮಾಲನ್ನು ಪತ್ತೆಹಚ್ಚಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಬಂಧಿತರಿಂದ ಇನ್ನಷ್ಟು ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

3 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

23 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago