ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities.

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ.

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ಕೆದಲುಗುಡ್ಡೆ, ಬೆಳಂದೂರು ಮತ್ತು ಕೆಂಚನಾಲ ಗ್ರಾಮಗಳಲ್ಲಿ ನಿಯಮಿತವಾಗಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಕೆಂಚನಾಲ ಗ್ರಾಮದ ಸಾಗವಾನಿ ಪ್ಲಾಂಟೇಷನ್ ಪ್ರದೇಶದಲ್ಲಿ ಕೆಲವು ವ್ಯಕ್ತಿಗಳು ಗುಂಪುಗೂಡಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

3 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

3 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

1 day ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

2 days ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

2 days ago