A woman from Thirthahalli in Shivamogga district has died due to Kyasanur Forest Disease (KFD), marking the second death this year. Authorities report 29 cases and ongoing treatment for several patients.
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಕ್ಯಾಸನೂರು ಅರಣ್ಯ ರೋಗ (ಕೆಎಫ್ಡಿ) ಆತಂಕ ಹೆಚ್ಚುತ್ತಿರುವ ನಡುವೆಯೇ, ಈ ವರ್ಷ ಎರಡನೇ ಸಾವು ಸಂಭವಿಸಿರುವುದು ಜನರಲ್ಲಿ ಭೀತಿಗೆ ಕಾರಣವಾಗಿದೆ.
ಅರಳಸುರುಳಿ ಸಮೀಪದ ತಟ್ಟಿಕೇವಿ ಗ್ರಾಮದ ಗುಲಾಬಿ ಶೆಟ್ಟಿ (ಮಹಿಳೆ) ಅವರು ಕೆಎಫ್ಡಿ ಸೋಂಕಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರೋಗ ತೀವ್ರಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ಮೊದಲಿಗೆ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಮೊದಲು ಕಟಗಾರು ಆಸ್ಪತ್ರೆ ವ್ಯಾಪ್ತಿಯ ಹೊನ್ನೇಕೇರಿ ಗ್ರಾಮದ ಯುವಕನೊಬ್ಬ ಕೂಡ ಕೆಎಫ್ಡಿ ಸೋಂಕಿಗೆ ಬಲಿಯಾಗಿದ್ದನು. ಇದರಿಂದಾಗಿ ತಾಲೂಕಿನಲ್ಲಿ ಈ ವರ್ಷ ಸಾವಿನ ಸಂಖ್ಯೆ ಎರಡುಕ್ಕೇರಿದೆ.
ತಾಲೂಕಿನಲ್ಲಿ ಇದುವರೆಗೆ ಒಟ್ಟು 29 ಕೆಎಫ್ಡಿ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ 5 ಮಂದಿ ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಅನಿಕೇತನ್ ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ಜನರು ಕಾಡು ಪ್ರದೇಶಗಳಿಗೆ ತೆರಳುವಾಗ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…