ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ
A 45-year-old poultry trader died after being struck by lightning in Ramanagara near Kumsi. The incident also caused a fire in his shop, killing several chickens.
ಕುಂಸಿ: ಸಮೀಪದ ರಾಮನಗರದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕೋಳಿ ವ್ಯಾಪಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಹಾರನಹಳ್ಳಿಯ ಶೇಖ್ ಮುಜೀಬ್ ಉರ್ ರಹಮಾನ್ (45) ಎಂದು ಗುರುತಿಸಲಾಗಿದೆ. ಇವರು ರಾಮನಗರ ಬಸ್ಸ್ಟ್ಯಾಂಡ್ ಸಮೀಪ ಮರದ ಕೆಳಗೆ ಕೋಳಿ ಅಂಗಡಿ ನಡೆಸುತ್ತಿದ್ದರು.
ಸೋಮವಾರ ಸಂಜೆ ಮಳೆಯೊಂದಿಗೆ ಭಾರೀ ಸಿಡಿಲು ಬಡಿದಿದ್ದು, ಕೋಳಿ ಅಂಗಡಿ ಮತ್ತು ಪಕ್ಕದಲ್ಲಿದ್ದ ಮರಕ್ಕೆ ಮಿಂಚು ತಗುಲಿದೆ. ಇದೇ ವೇಳೆ ಅಂಗಡಿಯಲ್ಲಿ ಇದ್ದ ಶೇಖ್ ಮುಜೀಬ್ ಉರ್ ರಹಮಾನ್ ಅವರಿಗೂ ಸಿಡಿಲು ಬಡಿದು ಅವರು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಪರಿಣಾಮ ಅಂಗಡಿಗೆ ಬೆಂಕಿ ಹೊತ್ತಿಕೊಂಡು, ಅಂಗಡಿಯಲ್ಲಿ ಇದ್ದ ಕೋಳಿಗಳು ಸುಟ್ಟು ಭಸ್ಮವಾಗಿವೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…