A 53-year-old woman from Kundapura drowned in the Varahi River near Bhagamane, close to Hosangadi, while on a trekking trip with friends. Police have registered a case and are investigating the incident.
ಹೊಸಂಗಡಿ ಸಮೀಪದ ಭಾಗಿಮನೆ ಬಳಿ ವಾರಾಹಿ ನದಿಯ ನೀರಿನಲ್ಲಿ ಮುಳುಗಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ.
ದುರಂತದಲ್ಲಿ ಮೃತಪಟ್ಟವರನ್ನು ಕುಂದಾಪುರ ನಗರದ ಮಯೂರ ಮೆಡಿಕಲ್ ಮಾಲೀಕೆಯಾಗಿರುವ ಶುಭಶ್ರೀ (53) ಎಂದು ಗುರುತಿಸಲಾಗಿದೆ.
ಅವರು ತಮ್ಮ ಜಿಮ್ ಕ್ಲಬ್ನ ಗೆಳತಿಯರೊಂದಿಗೆ ಭಾನುವಾರ ಬೆಳಿಗ್ಗೆ ತಾಲ್ಲೂಕಿನ ಹೊಸಂಗಡಿ ಸಮೀಪದ ಮೆಟ್ಕಲ್ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದರು ಎನ್ನಲಾಗಿದೆ.
ಟ್ರೆಕ್ಕಿಂಗ್ ಮುಗಿಸಿ ಭಾಗಿಮನೆ ಎಂಬಲ್ಲಿ ವಾರಾಹಿ ನದಿ ಅಂಚಿನ ಕಲ್ಲುಬಂಡೆಯ ಮೇಲೆ ಕುಳಿತಿದ್ದ ವೇಳೆ, ಆಕಸ್ಮಿಕವಾಗಿ ಹೆಚ್ಚಿದ ನೀರಿನ ಹರಿವಿನಿಂದ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಪರಿಣಾಮವಾಗಿ ಅವರು ನೀರಿನಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತ ಶುಭಶ್ರೀ ಅವರು ನಗರದ ಚಿಕನ್ ಸಾಲ್ ರಸ್ತೆಯ ನಿವಾಸಿಯಾಗಿದ್ದು, ಓರ್ವ ಪುತ್ರನನ್ನು ಅಗಲಿದ್ದಾರೆ.
ಘಟನೆ ಸಂಬಂಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರೆದಿದೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…