Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution.
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ ಗ್ರಾಮದ ಸಮೀಪದ ಮೆಕ್ಕೆಜೋಳದ ಜಮೀನಿಗೆ ಮೇವು ತರಲು ತೆರಳಿದ್ದಾಗ ಚಿರತೆ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೊಂದೆಡೆ, ತಡಸನಹಳ್ಳಿ ಗ್ರಾಮದ ಮುತ್ತಣ್ಣ ಅವರು ಶನಿವಾರ ಬೆಳಿಗ್ಗೆ ಗದ್ದೆಗೆ ನೀರು ಬಿಡಲು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಗಾಯಗೊಂಡ ಮುತ್ತಣ್ಣ ಅವರನ್ನು ಕೂಡ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದಲ್ಲದೆ, ಶನಿವಾರ ಸಂಜೆ ತಡಸನಹಳ್ಳಿ–ಅಡಗಂಟಿ ಗ್ರಾಮದ ನಡುವಿನ ಮುಖ್ಯ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಹೂವ್ಯನಾಯ್ಕ ಅವರ ಮೇಲೂ ಚಿರತೆ ದಾಳಿ ಮಾಡಲು ಯತ್ನಿಸಿದೆ. ಅವರು ಪ್ರಥಮ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
ಘಟನೆ ಹಿನ್ನೆಲೆ ತಡಸನಹಳ್ಳಿ, ಅಡಗಂಟಿ ಗ್ರಾಮಗಳ ಜಮೀನು ಪ್ರದೇಶ ಹಾಗೂ ಮುತ್ತಗಿ ಕಿರು ಅರಣ್ಯದಲ್ಲಿ ಮೂರು ಕಡೆ ಬೋನುಗಳನ್ನು ಅಳವಡಿಸಲಾಗಿದೆ. ಸಾಮಾನ್ಯವಾಗಿ ಚಿರತೆಗಳು ಮನುಷ್ಯರ ಮೇಲೆ ದಾಳಿ ಮಾಡುವುದಿಲ್ಲ. ಆದರೆ ಇದು ಅಸ್ವಸ್ಥವಾಗಿರಬಹುದು ಅಥವಾ ಅರಣ್ಯದಿಂದ ವಿಚಲಿತಗೊಂಡಿರುವ ಸಾಧ್ಯತೆ ಇದೆ ಎಂದು ವಲಯ ಅರಣ್ಯಾಧಿಕಾರಿ ಜಾವಿದ್ ಅಂಗಡಿ ತಿಳಿಸಿದ್ದಾರೆ.
ಚಿರತೆ ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿದ್ದು, ರೈತರು ಜಮೀನಿಗೆ ತೆರಳಲು ಹೆದರುತ್ತಿದ್ದಾರೆ. ತಕ್ಷಣ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ರೈತರು ಜಮೀನಿಗೆ ತೆರಳುವ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅರಣ್ಯ ಇಲಾಖೆ ಸೂಚನೆ ನೀಡಿದೆ.
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…