A young couple died by suicide by hanging in a rented house at Jayanagar in KR Pet, Mandya district. Their two-year-old daughter survived the tragic incident. Police have registered a case and started an investigation.
ಮಂಡ್ಯ : ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿದೆ.
ಈ ಘಟನೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಅದೃಷ್ಟವಶಾತ್ ಬದುಕುಳಿದಿದೆ.
ಆತ್ಮಹತ್ಯೆ ಮಾಡಿಕೊಂಡವರು ಕೆ.ಆರ್.ಪೇಟೆ ತಾಲೂಕಿನ ಹೊಸಕೋಟೆ ಗ್ರಾಮದ ದರ್ಶನ್ (29) ಹಾಗೂ ಅವರ ಪತ್ನಿ ದಿವ್ಯಶ್ರೀ (25) ಎಂದು ಗುರುತಿಸಲಾಗಿದೆ.
ಇವರು ಜಯನಗರದಲ್ಲಿನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.ದರ್ಶನ್ ಕೃಷಿಯ ಜೊತೆಗೆ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಪತ್ನಿ ದಿವ್ಯಶ್ರೀ ಪ್ಯಾರಾಮೆಡಿಕಲ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ದಂಪತಿ ತಮ್ಮ ಎರಡು ವರ್ಷದ ಹೆಣ್ಣು ಮಗುವಿನ ಜೀವಕ್ಕೂ ಹಾನಿ ಮಾಡಲು ಯತ್ನಿಸಿದರೆಂಬ ಶಂಕೆ ವ್ಯಕ್ತವಾಗಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿದೆ ಎಂದು ಮಾಹಿತಿ ಲಭ್ಯವಾಗಿದೆ.
ದಿವ್ಯಶ್ರೀ ಅವರು ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದವರಾಗಿದ್ದು, ಸುಮಾರು ಮೂರು ವರ್ಷಗಳ ಹಿಂದೆ ಹೊಸಕೋಟೆಯ ದರ್ಶನ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಸಂಬಂಧ ದರ್ಶನ್ ಅವರ ತಂದೆ ನೀಡಿದ ದೂರಿನ ಮೇರೆಗೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್