A milk tanker truck carrying 20,000 liters of milk overturned near Mavinahole close to Marutipura on the Ranebennur–Byndoor National Highway. The container broke open and milk spilled onto the road like a stream. The driver escaped with minor injuries.
ಹೊಸನಗರ : ಹಾಲು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಾರುತಿಪುರ ಸಮೀಪದ ಮಾವಿನಹೊಳೆ ಪ್ರದೇಶದಲ್ಲಿ ಸಂಭವಿಸಿದೆ.
ಶಿವಮೊಗ್ಗದ ಕಡೆಯಿಂದ ಕಾಸರಗೋಡಿನತ್ತ ತೆರಳುತ್ತಿದ್ದ ಹಾಲಿನ ಕಂಟೇನರ್ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅಪಘಾತದ ವೇಳೆ ಟ್ರಕ್ ಭಾರೀ ವೇಗದಲ್ಲಿದ್ದ ಕಾರಣ ಅದರ ಮೇಲಿದ್ದ ಸುಮಾರು 20 ಸಾವಿರ ಲೀಟರ್ ಸಾಮರ್ಥ್ಯದ ಹಾಲಿನ ಕಂಟೇನರ್ ಜೋರಾಗಿ ನೆಲಕ್ಕೆ ಬಿದ್ದಿದೆ. ಪಲ್ಟಿಯಾದ ರಭಸಕ್ಕೆ ಕಂಟೇನರ್ ಒಡೆದು ಹಾಲು ರಸ್ತೆಯ ಮೇಲೆಯೇ ಹೊಳೆಯಂತೆ ಹರಿದ ದೃಶ್ಯ ಕಂಡುಬಂದಿತು.
ಅಪಘಾತದ ನಂತರ ಕೆಲವು ಸಮಯ ರಸ್ತೆ ಮೇಲೆ ಹಾಲು ಹರಿದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿಚಿತ್ರ ದೃಶ್ಯ ನಿರ್ಮಾಣವಾಯಿತು. ಅಪಘಾತದಲ್ಲಿ ಟ್ರಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಚಾಲಕನನ್ನು ಸ್ಥಳೀಯರು ಪ್ರಾಥಮಿಕ ಚಿಕಿತ್ಸೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮ ಕೆಲಕಾಲ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಯಿತು. ಬಳಿಕ ಸ್ಥಳೀಯರು ಹಾಗೂ ಪೊಲೀಸರು ಸೇರಿ ಲಾರಿಯನ್ನು ತೆರವುಗೊಳಿಸುವ ಕಾರ್ಯ ಕೈಗೊಂಡರು.
ತಿರುವು ಪ್ರದೇಶದಲ್ಲಿ ವೇಗ ನಿಯಂತ್ರಣ ಇಲ್ಲದಿರುವುದು ಮತ್ತು ರಸ್ತೆ ಪರಿಸ್ಥಿತಿ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಈ ಸಂಬಂಧ ಹೊಸನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…