The Tourism Department has invited applications for subsidy under the Mobile Canteen Scheme 2025-26 in Shivamogga district. Eligible SC and ST candidates can apply to receive financial assistance for purchasing mobile canteen vehicles. Last date to apply is March 13
ಶಿವಮೊಗ್ಗ: ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಜೊತೆಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ 2025-26ನೇ ಸಾಲಿನಲ್ಲಿ “ಮೊಬೈಲ್ ಕ್ಯಾಂಟೀನ್ ಯೋಜನೆ” ಜಾರಿಗೆ ತಂದಿದೆ.
ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಯ 6 ಮಂದಿ ಹಾಗೂ ಪರಿಶಿಷ್ಟ ಪಂಗಡದ 4 ಮಂದಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಯ ಪ್ರಯೋಜನ ಪಡೆಯಲು ಅಭ್ಯರ್ಥಿಗಳು 20 ರಿಂದ 55 ವರ್ಷದೊಳಗಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಜೊತೆಗೆ ಆಧಾರ್ ಕಾರ್ಡ್ ಪ್ರತಿ, ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್ನಿಂದ ಸಾಲ ಪಡೆಯಲು ಅರ್ಹತೆ ಹೊಂದಿರುವ ಬಗ್ಗೆ ಮಂಜೂರಾತಿ ಅಥವಾ ದೃಢೀಕರಣ ಪತ್ರ ಸಲ್ಲಿಸಬೇಕು.
ಅಭ್ಯರ್ಥಿಗಳು ಇಲಾಖೆಯಿಂದ ನೀಡಲಾಗುವ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯವಾಗಿ ಪಡೆಯುವುದಾಗಿ ಪ್ರಮಾಣ ಪತ್ರ ಸಲ್ಲಿಸಬೇಕು. ಜೊತೆಗೆ ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ/ಮಂಡಳಿಯಲ್ಲಿ ಖಾಯಂ ನೌಕರರಾಗಿಲ್ಲವೆಂಬ ಸ್ವಯಂ ಘೋಷಣೆಯನ್ನೂ ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು ಅನಿವಾರ್ಯವಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಮಾರ್ಚ್ 13ರೊಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರಾದ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-251444 ಅನ್ನು ಸಂಪರ್ಕಿಸಬಹುದು.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…