A 25-year-old woman was found dead in R. Chokkanahalli village of Chikkaballapura district after a quarrel with her husband over a phone call from her friend’s lover. The woman’s family has accused the husband of murder, and police have launched an investigation.
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಫೋನ್ ಕಾಲ್ ವಿಚಾರವಾಗಿ ಗಂಡ-ಹೆಂಡತಿ ನಡುವೆ ಉಂಟಾದ ಗಲಾಟೆ ದುರಂತ ಅಂತ್ಯ ಕಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ವರಲಕ್ಷ್ಮಿ (25) ಎಂದು ಗುರುತಿಸಲಾಗಿದೆ.
ವರಲಕ್ಷ್ಮಿಯ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷ್ಮಿಯ ಮೊಬೈಲ್ಗೆ ಕರೆ ಮಾಡಿದ್ದಾನೆ. ಆ ಸಮಯದಲ್ಲಿ ವರಲಕ್ಷ್ಮಿಯ ಗಂಡ ಗಂಗರಾಜು ಫೋನ್ನ್ನು ರಿಸೀವ್ ಮಾಡಿದ್ದಾನೆ. ಇದರಿಂದ ಅನುಮಾನಗೊಂಡ ಗಂಗರಾಜು, ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ವಹಿಸಬೇಡ ಎಂದು ಹೆಂಡತಿಗೆ ಬೈದು ಬುದ್ಧಿವಾದ ಹೇಳಿದ್ದಾನೆ ಎಂದು ತಿಳಿದುಬಂದಿದೆ.
ಈ ವಿಚಾರದಲ್ಲಿ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದ್ದು, ನಂತರ ವರಲಕ್ಷ್ಮಿ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇತ್ತ, ವರಲಕ್ಷ್ಮಿಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು, ಗಂಗರಾಜನೇ ವರಲಕ್ಷ್ಮಿಯನ್ನು ನೇಣಿಗೆ ಹಾಕಿ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಜೊತೆಗೆ ಮೃತದೇಹವನ್ನು ಸಕಾಲಕ್ಕೆ ತೋರಿಸಲಿಲ್ಲ ಎಂದು ಹೇಳಿ ಪೆರೇಸಂದ್ರ ಪೊಲೀಸರು ಹಾಗೂ ಗುಡಿಬಂಡೆ ತಾಲೂಕು ಆಸ್ಪತ್ರೆ ವಿರುದ್ಧವೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…