Heavy rain with hailstorm in Ripponpete caused a coconut tree to fall on a Tata Ace vehicle in Shabarishanagara, narrowly avoiding a major tragedy; vehicle severely damaged.
ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಆಲಿಕಲ್ಲು, ಗುಡುಗು ಸಹಿತ ಸುರಿದ ಭಾರೀ ಮಳೆಯ ಪರಿಣಾಮವಾಗಿ ಟಾಟಾ ಏಸ್ ಲಗೇಜ್ ವಾಹನದ ಮೇಲೆ ತೆಂಗಿನಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.
ಶಬರೀಶನಗರ ನಿವಾಸಿ ಗುಂಡಣ್ಣ (ಗಂಗಾಧರ್) ಅವರಿಗೆ ಸೇರಿದ ಟಾಟಾ ಏಸ್ ವಾಹನವನ್ನು ಮನೆ ಸಮೀಪ ನಿಲ್ಲಿಸಲಾಗಿತ್ತು. ಏಕಾಏಕಿ ಶುರುವಾದ ಭಾರೀ ಮಳೆ ಮತ್ತು ಗಾಳಿ ಮಿಶ್ರಿತ ಆಲಿಕಲ್ಲು ಸುರಿಮಳೆಯ ಪರಿಣಾಮವಾಗಿ ಹತ್ತಿರದಲ್ಲಿದ್ದ ತೆಂಗಿನಮರ ಬೇರು ಸಮೇತ ಉರುಳಿ ಬಿದ್ದು ನೇರವಾಗಿ ವಾಹನದ ಮೇಲೆ ಬಿದ್ದಿದೆ. ಪರಿಣಾಮ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ವಾಹನದ ಮೇಲ್ಭಾಗ ಗಂಭೀರ ಹಾನಿಗೊಳಗಾಗಿದೆ.
ಘಟನೆಯ ವೇಳೆ ಯಾರೂ ವಾಹನದ ಒಳಗೆ ಇಲ್ಲದಿರುವುದು ದೊಡ್ಡ ಅಪಾಯವನ್ನು ತಪ್ಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಳಿ ಮಳೆಯ ತೀವ್ರತೆಗೆ ಕೆಲಕಾಲ ಜನರಲ್ಲಿ ಆತಂಕ ಉಂಟಾಗಿತ್ತು.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪಿಎಸ್ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರವನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಸ್ಥಳೀಯರ ಸಹಾಯದಿಂದ ಕ್ರಮ ಕೈಗೊಳ್ಳಲಾಗಿದೆ.
ಇದಕ್ಕೂ ಮೊದಲು ಪಟ್ಟಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಸಹಿತ ಗುಡುಗು ಮಳೆಯು ಸುರಿದಿದ್ದು, ಕೆಲವು ಕಡೆಗಳಲ್ಲಿ ಮರಗಳು ಉರುಳಿದ ವರದಿಗಳು ಕೂಡ ಲಭ್ಯವಾಗಿವೆ. ಮಳೆಯಿಂದಾಗಿ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು.
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…