Heavy rain with hailstorm in Ripponpete caused a coconut tree to fall on a Tata Ace vehicle in Shabarishanagara, narrowly avoiding a major tragedy; vehicle severely damaged.
ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಆಲಿಕಲ್ಲು, ಗುಡುಗು ಸಹಿತ ಸುರಿದ ಭಾರೀ ಮಳೆಯ ಪರಿಣಾಮವಾಗಿ ಟಾಟಾ ಏಸ್ ಲಗೇಜ್ ವಾಹನದ ಮೇಲೆ ತೆಂಗಿನಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.
ಶಬರೀಶನಗರ ನಿವಾಸಿ ಗುಂಡಣ್ಣ (ಗಂಗಾಧರ್) ಅವರಿಗೆ ಸೇರಿದ ಟಾಟಾ ಏಸ್ ವಾಹನವನ್ನು ಮನೆ ಸಮೀಪ ನಿಲ್ಲಿಸಲಾಗಿತ್ತು. ಏಕಾಏಕಿ ಶುರುವಾದ ಭಾರೀ ಮಳೆ ಮತ್ತು ಗಾಳಿ ಮಿಶ್ರಿತ ಆಲಿಕಲ್ಲು ಸುರಿಮಳೆಯ ಪರಿಣಾಮವಾಗಿ ಹತ್ತಿರದಲ್ಲಿದ್ದ ತೆಂಗಿನಮರ ಬೇರು ಸಮೇತ ಉರುಳಿ ಬಿದ್ದು ನೇರವಾಗಿ ವಾಹನದ ಮೇಲೆ ಬಿದ್ದಿದೆ. ಪರಿಣಾಮ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ವಾಹನದ ಮೇಲ್ಭಾಗ ಗಂಭೀರ ಹಾನಿಗೊಳಗಾಗಿದೆ.
ಘಟನೆಯ ವೇಳೆ ಯಾರೂ ವಾಹನದ ಒಳಗೆ ಇಲ್ಲದಿರುವುದು ದೊಡ್ಡ ಅಪಾಯವನ್ನು ತಪ್ಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಳಿ ಮಳೆಯ ತೀವ್ರತೆಗೆ ಕೆಲಕಾಲ ಜನರಲ್ಲಿ ಆತಂಕ ಉಂಟಾಗಿತ್ತು.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪಿಎಸ್ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರವನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಸ್ಥಳೀಯರ ಸಹಾಯದಿಂದ ಕ್ರಮ ಕೈಗೊಳ್ಳಲಾಗಿದೆ.
ಇದಕ್ಕೂ ಮೊದಲು ಪಟ್ಟಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಸಹಿತ ಗುಡುಗು ಮಳೆಯು ಸುರಿದಿದ್ದು, ಕೆಲವು ಕಡೆಗಳಲ್ಲಿ ಮರಗಳು ಉರುಳಿದ ವರದಿಗಳು ಕೂಡ ಲಭ್ಯವಾಗಿವೆ. ಮಳೆಯಿಂದಾಗಿ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…