RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ

A collision between a truck and a car occurred at Vinayaka Circle in Ripponpete, causing severe damage to the car and temporary traffic disruption.

RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ

ವಿನಾಯಕ ವೃತ್ತದಲ್ಲಿ ಸುರಕ್ಷತಾ ಕ್ರಮಗಳ ಕೊರತೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಹೊಸನಗರ ರಸ್ತೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಎಚ್‌ಪಿ ಗ್ಯಾಸ್ ಸಾಗಿಸುತ್ತಿದ್ದ ಲಾರಿ ಹಾಗೂ ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ತೆರಳುತಿದ್ದ ಕಾರಿನ ನಡುವೆ ಸಂಭವಿಸಿದ ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನ ಗಾಜುಗಳು ಪುಡಿಯಾಗಿವೆ. ಘಟನೆಯ ಪರಿಣಾಮವಾಗಿ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಯಿತು.

ಕಾರು ಪ್ರಯಾಣಿಕರು ಸಾಗರ ಸಮೀಪದ ತೊಗರ್ಸಿ ಮೂಲದವರೆಂದು ಹೇಳಲಾಗುತ್ತಿದೆ.ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ವಾಹನಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಗಮಗೊಳಿಸಿದರು.

ವಿನಾಯಕ ವೃತ್ತದಲ್ಲಿ ಸುರಕ್ಷತಾ ಕ್ರಮಗಳ ಕೊರತೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ರಿಪ್ಪನ್‌ಪೇಟೆ ಪಟ್ಟಣದ ಪ್ರಮುಖ ಸಂಪರ್ಕ ಕೇಂದ್ರವಾಗಿರುವ ವಿನಾಯಕ ವೃತ್ತದಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆಗಳ ಕೊರತೆ ಕಂಡುಬರುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಈ ವೃತ್ತದಲ್ಲಿ ನಾಲ್ಕು ಪ್ರಮುಖ ರಸ್ತೆಗಳು ಒಂದೇ ಸ್ಥಳದಲ್ಲಿ ಕೂಡಿಕೊಳ್ಳುವುದರಿಂದ ದಿನದ ಹೆಚ್ಚಿನ ಸಮಯದಲ್ಲಿ ವಾಹನ ಸಂಚಾರ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಸರಿಯಾದ ವೇಗ ನಿಯಂತ್ರಣ ಹಂಪ್‌ಗಳು, ಬ್ಯಾರಿಕೇಡ್‌ಗಳು ಅಥವಾ ಎಚ್ಚರಿಕೆ ಸೂಚಕ ಫಲಕಗಳ ಕೊರತೆ ಇರುವುದರಿಂದ ವಾಹನಗಳು ಅತೀ ವೇಗವಾಗಿ ಸಂಚರಿಸುತ್ತಿರುವುದು ಸಾಮಾನ್ಯವಾಗಿದೆ.

ವಿಶೇಷವಾಗಿ ಲಾರಿಗಳು, ಕಾರುಗಳು ಹಾಗೂ ದ್ವಿಚಕ್ರ ವಾಹನಗಳು ಯಾವುದೇ ನಿಯಂತ್ರಣವಿಲ್ಲದೆ ವೇಗವಾಗಿ ವೃತ್ತವನ್ನು ದಾಟುತ್ತಿರುವುದರಿಂದ ಅಪಘಾತಗಳ ಸಂಭವ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆದ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿ ಘಟನೆ ಈ ಸಮಸ್ಯೆಯನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅದೃಷ್ಟವಶಾತ್ ಈ ಬಾರಿ ಪ್ರಾಣಾಪಾಯ ಸಂಭವಿಸದಿದ್ದರೂ, ಮುಂದಿನ ದಿನಗಳಲ್ಲಿ ಇದೇ ರೀತಿಯ ನಿರ್ಲಕ್ಷ್ಯ ಮುಂದುವರಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇರುವುದನ್ನು ಸ್ಥಳೀಯರು ಸೂಚಿಸುತ್ತಿದ್ದಾರೆ.

ಸ್ಥಳೀಯ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಹಲವು ಬಾರಿ ಈ ಸಮಸ್ಯೆಯ ಕುರಿತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎನ್ನುವುದು ಅವರ ಅಸಮಾಧಾನವಾಗಿದೆ. ಕನಿಷ್ಠವಾಗಿ ವೇಗ ನಿಯಂತ್ರಣ ಹಂಪ್‌ಗಳನ್ನು ನಿರ್ಮಿಸುವುದು, ಬ್ಯಾರಿಕೇಡ್‌ಗಳನ್ನು ಅಳವಡಿಸುವುದು ಹಾಗೂ ಎಚ್ಚರಿಕೆ ಫಲಕಗಳನ್ನು ಸ್ಥಾಪಿಸುವುದರಿಂದ ಅಪಘಾತಗಳನ್ನು ಕಡಿಮೆ ಮಾಡಬಹುದೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ನಾಲ್ಕು ರಸ್ತೆಗಳು ಸೇರುವ ಈ ಪ್ರಮುಖ ವೃತ್ತದಲ್ಲಿ ಸಂಭವಿಸಬಹುದಾದ ಭಾರಿ ಅನಾಹುತಗಳನ್ನು ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

3 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

6 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

6 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

7 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

14 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

15 hours ago