ಹೊಂಬುಜದಲ್ಲಿ ಪ್ರೊ. ಶಾಂತಿನಾಥ ದಿಬ್ಬದರಿಗೆ ‘ಸಿದ್ಧಾಂತಕೀರ್ತಿ’ ಪ್ರಶಸ್ತಿ ಪ್ರದಾನ

Prof. Shantinath Dibbada was honored with the Siddhantakeerthi Award at Hombuja Sri Kshetra. Religious leaders and dignitaries praised his contributions to Jain literature and research.

ಹೊಂಬುಜ : ಜೈನ ಧರ್ಮವು ಜೈನ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ವೃತ್ತಾಂತಗಳನ್ನು ನೀಡಿದ್ದು, ಆದಿಕವಿ ಪಂಪನ ಕೃತಿಗಳು ಇಂದಿನ ಕಾಲದಲ್ಲಿಯೂ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಂಶೋಧಕ ಹಾಗೂ ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರವರು ಅಭಿಪ್ರಾಯಪಟ್ಟರು.

ಹೊಂಬುಜ ಶ್ರೀಕ್ಷೇತ್ರದ ವತಿಯಿಂದ ಪ್ರದಾನವಾಗುವ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳವರಿಂದ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಪಂಪ ರಚಿತ ಆದಿಪುರಾಣದ ವಿವಿಧ ಸನ್ನಿವೇಶಗಳನ್ನು ಅವಲೋಕಿಸಿ ಜೈನ ತತ್ವದ ಮಹತ್ವವನ್ನು ವಿವರಿಸಿದರು. ಸ್ಯಾದ್ವಾದ ತತ್ವದ ಮೂಲಕ ಜೀವಜಗತ್ತಿನ ಹಾಗೂ ಪ್ರಕೃತಿಯ ರಕ್ಷಣೆಯ ಜೊತೆಗೆ ಮಾನವ ಕಲ್ಯಾಣದ ಸಂದೇಶವನ್ನು ಅರಿಯಬಹುದೆಂದು ಹೇಳಿದರು.

ಸಾಹಿತ್ಯ ಪ್ರಭೆಯನ್ನು ಬೆಳಗಿಸಲು ಹೊಂಬುಜ ಶ್ರೀಕ್ಷೇತ್ರವು ಸಾಹಿತ್ಯಾರಾಧನೆಯ ಮಹತ್ವವನ್ನು ಸಾರುತ್ತಿರುವುದು ಅಭಿನಂದನೀಯ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರವಚನ ನೀಡಿದ ಪರಮಪೂಜ್ಯ ಸ್ವಸ್ತಿಶ್ರೀಗಳು, ಯುವಪೀಳಿಗೆಯ ವಿದ್ಯಾವಂತರಿಗೆ ಹಳೆಗನ್ನಡ ಸಾಹಿತ್ಯದ ಅಭಿರುಚಿ ಬೆಳೆಸಿ ಜೀವನದಲ್ಲಿ ಆದರ್ಶವಾಗುವಂತೆ ಆಶಿಸಿದರು. ಪ್ರೊ. ಶಾಂತಿನಾಥ ದಿಬ್ಬದರವರು ಜೈನ ಸಾಹಿತ್ಯದ ಐತಿಹ್ಯ ಹಾಗೂ ಸಾರವನ್ನು ಸರಳವಾಗಿ ಜನರಿಗೆ ಪರಿಚಯಪಡಿಸಿ, ಅನೇಕ ಸಂಶೋಧನಾ ಕೃತಿಗಳನ್ನು ಪ್ರಕಟಿಸಿರುವುದು ಸಾಹಿತ್ಯಾಭಿಮಾನಿಗಳಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರೊ. ದಿಬ್ಬದರವರನ್ನು ಅಭಿನಂದಿಸಿ, ಅಹಿಂಸಾಧರ್ಮದ ಮೂಲಕ ರಾಷ್ಟ್ರೀಯ ಭಾವೈಕ್ಯತೆ, ಶಾಂತಿ ಮತ್ತು ನೆಮ್ಮದಿಯ ಸಂದೇಶವನ್ನು ಜೈನ ಧರ್ಮ ನೀಡುತ್ತಿರುವುದನ್ನು ವಿವರಿಸಿದರು.

ಶ್ರೀಕ್ಷೇತ್ರದ ಭಕ್ತರಾದ ವಿಜಯ ಪಾಟ್ನಿಯವರು ಅತಿಶಯ ಕ್ಷೇತ್ರದ ಮಹಿಮೆ ಸರ್ವರಿಗೂ ಪ್ರೇರಣೆಯಾಗಲಿ ಎಂದು ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಶ್ರೀಮಠದ ಆಡಳಿತಾಧಿಕಾರಿ ಸಿ.ಡಿ. ಅಶೋಕ ಕುಮಾರ್ ಸ್ವಾಗತಿಸಿ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಯಶೋಧರ ಇಂದ್ರರು ಪ್ರಶಸ್ತಿ ಪತ್ರ ವಾಚನ ಮಾಡಿದರು. ಹೆಚ್.ಬಿ. ಸಂತೋಷಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ರಥೋತ್ಸವ ದಾನಿಗಳನ್ನೂ ಪೂಜ್ಯ ಶ್ರೀಗಳು ಅಭಿನಂದಿಸಿ ಆಶೀರ್ವದಿಸಿದರು.

ಕಾರ್ಯಕ್ರಮದಲ್ಲಿ ಪ್ರೊ. ಶಾಂತಿನಾಥ ದಿಬ್ಬದರವರ ಧರ್ಮಪತ್ನಿ ರತ್ನ ಶಾಂತಿನಾಥ ದಿಬ್ಬದರವರು ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

3 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago