Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights.
ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ ಹೋರಾಟ ಸಮಿತಿ ಇಂದು ಭಾರೀ ಪ್ರತಿಭಟನೆ ನಡೆಸಿತು. ಸಿಗಂದೂರು ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ನೂರಾರು ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸಮಿತಿಯ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಕೆಪಿಸಿ ಭೂಮಿಯನ್ನು ನಂಬಿಕೊಂಡು ಬದುಕುತ್ತಿರುವ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು. 1964ರಿಂದಲೂ ಮುಳುಗಡೆ ಸಂತ್ರಸ್ತರು ಎದುರಿಸುತ್ತಿರುವ ನೋವು, ಅನ್ಯಾಯ ಮತ್ತು ಅಸುರಕ್ಷಿತ ಬದುಕಿನ ಬಗ್ಗೆ ಸರ್ಕಾರಗಳು ನಿರಂತರವಾಗಿ ಕಿವಿಗೊಡದೇ ಬರುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತೀ.ನ. ಶ್ರೀನಿವಾಸ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಒಂದು ವರ್ಷದೊಳಗೆ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿದ್ದರು ಎಂದು ನೆನಪಿಸಿದರು. ಆದರೆ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಈ ವಿಷಯದಲ್ಲಿ ಯಾವುದೇ ಗಂಭೀರ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಕೋರ್ಟ್ ಮೆಟ್ಟಿಲೇರಲು ಸಲಹೆ ನೀಡುತ್ತಿರುವುದು ಅಸ್ವೀಕಾರಾರ್ಹ ಎಂದು ಶ್ರೀನಿವಾಸ್ ಟೀಕಿಸಿದರು. “ರೈತರೇ ಕೋರ್ಟ್ಗೆ ಹೋಗಬೇಕಾದರೆ ಜನಪ್ರತಿನಿಧಿಗಳ ಅವಶ್ಯಕತೆಯೇನು?” ಎಂದು ಪ್ರಶ್ನಿಸಿ, ಸಮಸ್ಯೆ ಬಗೆಹರಿಸಲು ಅಸಮರ್ಥರಾದವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಹಂತದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಸಚಿವರ ಕಚೇರಿಗಳಿಗೆ ಮುತ್ತಿಗೆ ಹಾಕುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…