ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಆಗ್ರಹ

Suspicious death of a leopard in Shikaripura after attacking a farmer raises poisoning concerns; forest officials suspect starvation while experts demand toxicology investigation.

ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ತಡಸ ಗ್ರಾಮದ ನಿವಾಸಿ ರೈತ ಮುತ್ತಣ್ಣ ಸೇರಿದಂತೆ ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ ಇಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ.

ಭಾನುವಾರ ರೈತನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದ ಇದೇ ಚಿರತೆ, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲೆಯಾಗುವಂತೆ ಮಾಡಿತ್ತು.
ಇಂದು ಚಿರತೆಯ ಮೃತದೇಹ ಪತ್ತೆಯಾಗಿದ್ದು, ಅದರ ದೇಹದಲ್ಲಿ ಯಾವುದೇ ಗೋಚರ ಗಾಯಗಳಿಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿ ಫಯಾಜುದ್ದೀನ್ ಡಿಸಿ ಅವರು, “ಚಿರತೆ ಹಸಿವಿನಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ” ಎಂದು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಜೊತೆಗೆ, ಈ ಸಾವಿನ ಕುರಿತು ಸಂಪೂರ್ಣ ತನಿಖೆ ನಡೆಯಲಿದೆ ಎಂದೂ ತಿಳಿಸಿದ್ದಾರೆ.

ಆದರೆ, ಈ ವಿವರಣೆ ಬಗ್ಗೆ ಸ್ಥಳೀಯರು ಮತ್ತು ವನ್ಯಜೀವಿ ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ನಿನ್ನೆ ದಾಳಿ ನಡೆಸಿದ ಚಿರತೆ ಇಂದು ಸಾವು ಕಂಡಿರುವುದು ವಿಷಪ್ರಾಶನ ಶಂಕೆಯನ್ನು ಹೆಚ್ಚಿಸಿದೆ. ಚಿರತೆಯ ದೇಹದಲ್ಲಿ ಗಾಯಗಳಿಲ್ಲದಿರುವುದು ಈ ಅನುಮಾನಕ್ಕೆ ಮತ್ತಷ್ಟು ಬಲ ನೀಡುತ್ತಿದೆ.

ಇತ್ತೀಚೆಗೆ ಶಿಕಾರಿಪುರ ಭಾಗದಲ್ಲಿ ಚಿರತೆಗಳ ಸರಣಿ ಸಾವುಗಳು ವರದಿಯಾಗುತ್ತಿದ್ದು, ಜನರಲ್ಲಿ ಭೀತಿ ಉಂಟಾಗಿದೆ. ಕೆಲವೇ ದಿನಗಳ ಹಿಂದೆ ತಡಸನಹಳ್ಳಿಯಲ್ಲಿ ದಾಳಿ ನಡೆಸಿದ ಮರುದಿನವೇ ಹೆಣ್ಣು ಚಿರತೆಯೊಂದು ಮೃತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ನಿಗೂಢ ಸಾವು ಎನ್ನಲಾಗಿದೆ.

ಅರಣ್ಯ ಇಲಾಖೆ ಹಸಿವಿನಿಂದ ಸಾವು ಎಂದು ಶಂಕಿಸುತ್ತಿರುವಾಗ, ವನ್ಯಜೀವಿ ತಜ್ಞರು ವಿಷಪ್ರಾಶನದ ಸಾಧ್ಯತೆಯನ್ನು ತಳ್ಳಿ ಹಾಕಲಾಗುವುದಿಲ್ಲ ಎಂದು ಹೇಳಿ, ವಿಷಶಾಸ್ತ್ರ (ಟಾಕ್ಸಿಕಾಲಜಿ) ವರದಿ ಪ್ರಕಟಿಸಲು ಆಗ್ರಹಿಸಿದ್ದಾರೆ. ಫೆಬ್ರವರಿಯಲ್ಲಿ ನಡೆದ ಚಿರತೆ ಮರಿಯ ಸಾವಿನ ತನಿಖೆಯೂ ಸಮರ್ಪಕವಾಗಿ ನಡೆದಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಈ ಬೆಳವಣಿಗೆಗಳ ನಡುವೆ, ಚಿರತೆಗಳ ಸಾವಿನ ಹಿಂದಿನ ನಿಜವಾದ ಕಾರಣ ಹೊರಬರಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

1 hour ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

2 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

3 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

4 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

11 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

11 hours ago