A bear entered Shivamogga Airport premises in Sogane, creating panic after being spotted in nearby Vinayaka Nagar. Forest officials have launched a search operation.
ಶಿವಮೊಗ್ಗ: ನಗರದ ಸೋಗಾನೆ ಪ್ರದೇಶದಲ್ಲಿರುವ ವಿಮಾನ ನಿಲ್ದಾಣದ ಒಳಗೆ ಕರಡಿ ನುಗ್ಗಿದ ಘಟನೆ ಸೋಮವಾರ ಬೆಳಿಗ್ಗೆ ಆತಂಕ ಸೃಷ್ಟಿಸಿದೆ. ಆಹಾರ ಅರಸುತ್ತ ಬಂದಿದ್ದ ಕರಡಿಯೊಂದು ಮೊದಲಿಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿದೆ.
ಸ್ಥಳೀಯ ಮನೆಗಳು ಹಾಗೂ ತೋಟಗಳ ಸುತ್ತ ಕರಡಿ ಓಡಾಡಿರುವ ದೃಶ್ಯಗಳನ್ನು ನಿವಾಸಿಗಳು ತಮ್ಮ ಮೊಬೈಲ್ಗಳಲ್ಲಿ ಚಿತ್ರೀಕರಿಸಿದ್ದಾರೆ. ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದರು.
ಇದೇ ವೇಳೆ ಕರಡಿ ವಿಮಾನ ನಿಲ್ದಾಣದ ಕಾಂಪೌಂಡ್ ಒಳಗೆ ಹಾರಿರುವುದಾಗಿ ತಿಳಿದುಬಂದಿದೆ. ಕಾಂಪೌಂಡ್ ಒಳಗೆ ದಟ್ಟ ಪೊದೆಗಳು ಬೆಳದಿರುವುದರಿಂದ ಕರಡಿ ಅಲ್ಲಿ ಅಡಗಿ ಕುಳಿತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಸ್ತುತ ಅರಣ್ಯ ಇಲಾಖೆ ಸಿಬ್ಬಂದಿ ವಿಮಾನ ನಿಲ್ದಾಣ ಹಾಗೂ ವಿನಾಯಕ ನಗರ ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದು, ಕರಡಿಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳೀಯರಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿದ್ದು, ಎಚ್ಚರಿಕೆ ವಹಿಸಲು ಅಧಿಕಾರಿಗಳು ಸೂಚಿಸಿದ್ದಾರೆ.
ಕಾಡುಪ್ರಾಣಿಯನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅವರು ಪ್ರಾಣಿಗಳ ಚಲನವಲನಗಳನ್ನು ಫೋಟೋಗಳು ಮತ್ತು ವೀಡಿಯೊಗಳಲ್ಲಿ ಸೆರೆಹಿಡಿದಿದ್ದಾರೆ. ಇನ್ನೂ ಕರಡಿ ವಿಮಾನ ನಿಲ್ದಾಣದ ಕಾಂಪೌಂಡ್ ಹಾರಿದ ವಿಡಿಯೋ ಹಾಗೂ ಫೋಟೋ ಕೂಡಾ ವೈರಲ್ ಆಗಿತ್ತು.
ಮಾರ್ಚ್ 30 ರಂದು ಅರಣ್ಯ ಇಲಾಖೆಯ ಅಧಿಕಾರಿಗಳು ಕರಡಿಯನ್ನು ಟ್ರಾಂಕ್ವಿಲೈಸರ್ ಡಾರ್ಟ್ ಮೂಲಕ ಶಾಂತಗೊಳಿಸಿ ನಂತರ ಸೆರೆಹಿಡಿಯುವಲ್ಲಿ ಯಶಸ್ವಿಯಾದರು. ಸುಮಾರು ಎರಡು ಗಂಟೆಗಳ ಕಾಲ ಪ್ರಾಣಿ ಹಿಡಿಯುವ ಕಾರ್ಯಾಚರಣೆ ನಡೆಯಿತು.
ವನ್ಯಜೀವಿ ಪಶುವೈದ್ಯ ಡಾ.ಮುರಳಿ ಮನೋಹರ್ ಮಾಧ್ಯಮ ಪ್ರತಿನಿಧಿಗಳಿಗೆ ಮಾತನಾಡಿ, ಕರಡಿಗೆ ಸುಮಾರು ಏಳು-ಎಂಟು ವರ್ಷ ವಯಸ್ಸಾಗಿದೆ. ಇದು ಆರೋಗ್ಯಕರವಾಗಿದೆ.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…