ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ – ಇಆರ್ಎಸ್ ಪೊಲೀಸರಿಂದ ರಕ್ಷಣೆ
A 16-year-old boy in Shivamogga attempted to jump into the Tunga River due to family issues but was rescued in time by ERSS police personnel during night patrol.
ಶಿವಮೊಗ್ಗ: ತಂದೆ-ತಾಯಿಗಳು ತಮ್ಮ ಮೇಲೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಮನೋಭಾವದಿಂದ 16 ವರ್ಷದ ಬಾಲಕನೊಬ್ಬ ತುಂಗ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಮಯೋಚಿತ ಕ್ರಮ ಕೈಗೊಂಡ ಇಆರ್ಎಸ್ (ERSS) ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ಬಾಲಕನ ಜೀವ ಉಳಿದಿದೆ.
ನಗರದ ಊರಗಡೂರಿನ ನಿವಾಸಿಯಾದ ಬಾಲಕನು ಕುಟುಂಬದಲ್ಲಿ ತಂದೆ-ತಾಯಿಗಳು ಅಣ್ಣ-ತಮ್ಮಂದಿರ ನಡುವೆ ಬೇಧಭಾವ ತೋರಿಸುತ್ತಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದನು ಎಂದು ತಿಳಿದುಬಂದಿದೆ.
ಮಾರ್ಚ್ 27ರಂದು ರಾತ್ರಿ ಗಸ್ತಿನಲ್ಲಿ ತೊಡಗಿದ್ದ ERSS ವಾಹನದ ಸಿಬ್ಬಂದಿಗೆ ಸಾರ್ವಜನಿಕರಿಂದ ಮಾಹಿತಿ ಲಭಿಸಿತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ERV ರೆಸ್ಪಾಂಡರ್ ಶಬ್ಬಿರ್ ಬೇಗ್ (ಸಿ.ಹೆಚ್.ಸಿ, ತುಂಗಾನಗರ ಪೊಲೀಸ್ ಠಾಣೆ) ಹಾಗೂ ಚಾಲಕ ಮಂಜುನಾಥ್ (ಎ.ಹೆಚ್.ಸಿ, ಡಿಎಆರ್, ಶಿವಮೊಗ್ಗ) ಅವರು ಸಾರ್ವಜನಿಕರ ಸಹಕಾರದೊಂದಿಗೆ ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸಿದರು.
ನಂತರ ಬಾಲಕನಿಗೆ ಸಮಾಧಾನ ಹೇಳಿ, ಇಂತಹ ತುರ್ತು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಮನವೊಲಿಸಿದರು. ಬಳಿಕ ಪೋಷಕರನ್ನು ಕರೆಸಿ, ಬಾಲಕನನ್ನು ಅವರ ಜವಾಬ್ದಾರಿಯಲ್ಲಿ ಮನೆಗೆ ಕಳುಹಿಸಲಾಯಿತು.
ಈ ಘಟನೆಗೆ ಸಂಬಂಧಿಸಿದಂತೆ ಇಆರ್ಎಸ್ ಪೊಲೀಸರ ತ್ವರಿತ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್