Heavy rain with hailstorm lashed Shivamogga at around 4:30 PM, causing waterlogging, house damage, and disruption to normal life in several areas including Vinoba Nagar and Gopalagowda Layout.
ಶಿವಮೊಗ್ಗ: ಇಂದು ಸಂಜೆ ಸುಮಾರು 4:30ರ ವೇಳೆಗೆ ನಗರದಲ್ಲಿ ಅಚ್ಚರಿಯ ರೀತಿಯಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲಿನ ಸಮೇತ ಭರ್ಜರಿ ಮಳೆಯಾಗಿದ್ದು, ದಿನಪೂರ್ತಿ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಾತ್ಕಾಲಿಕ ತಂಪು ತಂದಿದೆ. ಆದರೆ ಈ ಮಳೆಯ ರಭಸ ನಗರದಲ್ಲಿ ಹಲವೆಡೆ ಅವಾಂತರಗಳಿಗೂ ಕಾರಣವಾಗಿದೆ.
ಮಳೆಯ ಜೊತೆಗೆ ಸುರಿದ ಆಲಿಕಲ್ಲು ಜನರಲ್ಲಿ ಧಾರವಾಡ ಭಾಗದ ಕಲ್ಗಡಕಿಯ ದೃಶ್ಯವನ್ನು ನೆನಪಿಸುವಂತಿತ್ತು. ವಿನೋಬ ನಗರ ಪ್ರದೇಶದಲ್ಲಿ ಮಳೆಯ ತೀವ್ರತೆಗೆ ರಸ್ತೆಗಳಲ್ಲಿ ನೀರು ನಿಂತು ವಾಹನಗಳ ಟಯರ್ಗಳು ಜಲಾವೃತಗೊಂಡ ದೃಶ್ಯಗಳು ಕಂಡುಬಂದವು. ಕೆಲವೆಡೆ ವಿದ್ಯುತ್ ತಂತಿಗಳು ನೇತಾಡುತ್ತಿರುವುದು ಆತಂಕಕ್ಕೆ ಕಾರಣವಾಯಿತು.
ಆಲಿಕಲ್ಲಿನ ಮಳೆಯ ಪರಿಣಾಮವಾಗಿ ರಸ್ತೆ ಬದಿಗಳಲ್ಲಿದ್ದ ಮರಗಳ ಹಸಿರು ಎಲೆಗಳು ಉದುರಿ ರಸ್ತೆಗಳಿಗೆ ಹಸಿರು ಮೆರಗು ತಂದುಕೊಟ್ಟವು. ತರಕಾರಿ ಮಾರುಕಟ್ಟೆಯಿಂದ ಪೊಲೀಸ್ ಚೌಕಿಯವರೆಗೆ ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತು ದ್ವಿಮುಖ ಸಂಚಾರಕ್ಕೆ ಅಡ್ಡಿಯಾಯಿತು.
ಗಾಳಿ-ಮಳೆಯ ಅಬ್ಬರಕ್ಕೆ ಕೆಲವು ಮನೆಗಳ ಚಾವಣಿಗಳು ಹಾರಿಹೋಗಿರುವ ವರದಿಗಳು ಲಭ್ಯವಾಗಿವೆ. ನ್ಯೂ ಮಂಡ್ಲಿ ಪ್ರದೇಶದಲ್ಲಿ ಈಶ್ವರಪ್ಪ ಎಂಬವರ ಮನೆಯ ಹೆಂಚುಗಳು ಗಾಳಿಗೆ ಹಾರಿ ಹೋಗಿದ್ದು, ಮನೆಯೊಳಗೆ ಮಳೆಯ ನೀರು ನುಗ್ಗಿ ಹಾನಿ ಉಂಟಾಗಿದೆ.
ಇನ್ನೂ ಕೆಲವು ಬಡಾವಣೆಗಳಲ್ಲಿ ರಾಜಕಾಲುವೆ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿವೆ. ಗೋಪಾಲಗೌಡ ಬಡಾವಣೆಯ ಬಿ ಬ್ಲಾಕ್ನಲ್ಲಿ ಮೂರು ರಸ್ತೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎ ಬ್ಲಾಕ್ನಲ್ಲೂ ಇದೇ ಪರಿಸ್ಥಿತಿ ಕಂಡುಬಂದಿದೆ.
ಜೈಲ್ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳು ಜಲಾವೃತಗೊಂಡು ವಾಹನ ಸಂಚಾರಕ್ಕೂ ತೊಂದರೆಯಾಗಿದ್ದು, ಒಟ್ಟಾರೆ ಮಳೆಯ ಪರಿಣಾಮ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…