ಶಿವಮೊಗ್ಗದಲ್ಲಿ ಆಲಿಕಲ್ಲಿನ ಸಮೇತ ಭಾರಿ ಮಳೆ: ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy rain with hailstorm lashed Shivamogga at around 4:30 PM, causing waterlogging, house damage, and disruption to normal life in several areas including Vinoba Nagar and Gopalagowda Layout.

ಶಿವಮೊಗ್ಗ: ಇಂದು ಸಂಜೆ ಸುಮಾರು 4:30ರ ವೇಳೆಗೆ ನಗರದಲ್ಲಿ ಅಚ್ಚರಿಯ ರೀತಿಯಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲಿನ ಸಮೇತ ಭರ್ಜರಿ ಮಳೆಯಾಗಿದ್ದು, ದಿನಪೂರ್ತಿ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಾತ್ಕಾಲಿಕ ತಂಪು ತಂದಿದೆ. ಆದರೆ ಈ ಮಳೆಯ ರಭಸ ನಗರದಲ್ಲಿ ಹಲವೆಡೆ ಅವಾಂತರಗಳಿಗೂ ಕಾರಣವಾಗಿದೆ.

ಮಳೆಯ ಜೊತೆಗೆ ಸುರಿದ ಆಲಿಕಲ್ಲು ಜನರಲ್ಲಿ ಧಾರವಾಡ ಭಾಗದ ಕಲ್ಗಡಕಿಯ ದೃಶ್ಯವನ್ನು ನೆನಪಿಸುವಂತಿತ್ತು. ವಿನೋಬ ನಗರ ಪ್ರದೇಶದಲ್ಲಿ ಮಳೆಯ ತೀವ್ರತೆಗೆ ರಸ್ತೆಗಳಲ್ಲಿ ನೀರು ನಿಂತು ವಾಹನಗಳ ಟಯರ್‌ಗಳು ಜಲಾವೃತಗೊಂಡ ದೃಶ್ಯಗಳು ಕಂಡುಬಂದವು. ಕೆಲವೆಡೆ ವಿದ್ಯುತ್ ತಂತಿಗಳು ನೇತಾಡುತ್ತಿರುವುದು ಆತಂಕಕ್ಕೆ ಕಾರಣವಾಯಿತು.

ಆಲಿಕಲ್ಲಿನ ಮಳೆಯ ಪರಿಣಾಮವಾಗಿ ರಸ್ತೆ ಬದಿಗಳಲ್ಲಿದ್ದ ಮರಗಳ ಹಸಿರು ಎಲೆಗಳು ಉದುರಿ ರಸ್ತೆಗಳಿಗೆ ಹಸಿರು ಮೆರಗು ತಂದುಕೊಟ್ಟವು. ತರಕಾರಿ ಮಾರುಕಟ್ಟೆಯಿಂದ ಪೊಲೀಸ್ ಚೌಕಿಯವರೆಗೆ ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತು ದ್ವಿಮುಖ ಸಂಚಾರಕ್ಕೆ ಅಡ್ಡಿಯಾಯಿತು.

ಗಾಳಿ-ಮಳೆಯ ಅಬ್ಬರಕ್ಕೆ ಕೆಲವು ಮನೆಗಳ ಚಾವಣಿಗಳು ಹಾರಿಹೋಗಿರುವ ವರದಿಗಳು ಲಭ್ಯವಾಗಿವೆ. ನ್ಯೂ ಮಂಡ್ಲಿ ಪ್ರದೇಶದಲ್ಲಿ ಈಶ್ವರಪ್ಪ ಎಂಬವರ ಮನೆಯ ಹೆಂಚುಗಳು ಗಾಳಿಗೆ ಹಾರಿ ಹೋಗಿದ್ದು, ಮನೆಯೊಳಗೆ ಮಳೆಯ ನೀರು ನುಗ್ಗಿ ಹಾನಿ ಉಂಟಾಗಿದೆ.

ಇನ್ನೂ ಕೆಲವು ಬಡಾವಣೆಗಳಲ್ಲಿ ರಾಜಕಾಲುವೆ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿವೆ. ಗೋಪಾಲಗೌಡ ಬಡಾವಣೆಯ ಬಿ ಬ್ಲಾಕ್‌ನಲ್ಲಿ ಮೂರು ರಸ್ತೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎ ಬ್ಲಾಕ್‌ನಲ್ಲೂ ಇದೇ ಪರಿಸ್ಥಿತಿ ಕಂಡುಬಂದಿದೆ.

ಜೈಲ್ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳು ಜಲಾವೃತಗೊಂಡು ವಾಹನ ಸಂಚಾರಕ್ಕೂ ತೊಂದರೆಯಾಗಿದ್ದು, ಒಟ್ಟಾರೆ ಮಳೆಯ ಪರಿಣಾಮ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

2 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

2 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

1 day ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

2 days ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

2 days ago