A Shivamogga student writes her Class 10 exam despite her father’s death, showing remarkable courage and determination amid personal tragedy.
ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕುಟುಂಬವನ್ನು ದುಃಖದ ಸಾಗರದಲ್ಲಿ ಮುಳುಗಿಸಿದೆ.
ಇದೇ ವೇಳೆ ಬುಧವಾರ ಶರಣ್ಯಗೆ 10ನೇ ತರಗತಿಯ ಇಂಗ್ಲಿಷ್ ಪರೀಕ್ಷೆ ನಿಗದಿಯಾಗಿತ್ತು. ಒಂದೆಡೆ ತಂದೆಯ ಮರಣದ ನೋವು, ಮತ್ತೊಂದೆಡೆ ಭವಿಷ್ಯ ನಿರ್ಧರಿಸುವ ಪ್ರಮುಖ ಪರೀಕ್ಷೆ—ಈ ಎರಡು ಸಂದರ್ಭಗಳ ನಡುವೆ ಆಕೆ ಗೊಂದಲಕ್ಕೀಡಾದಳು.
ಕುಟುಂಬದವರು, ಶಿಕ್ಷಕರು ಮತ್ತು ಗ್ರಾಮಸ್ಥರು ಧೈರ್ಯ ತುಂಬಿದ ಹಿನ್ನೆಲೆಯಲ್ಲಿ ಶರಣ್ಯ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಳು. ಬಳಿಕ ಮನೆಗೆ ಮರಳಿ ತಂದೆಯ ಅಂತಿಮ ದರ್ಶನ ಪಡೆದಳು.
ತಂದೆ ತಂಗರಾಜ್ ಹಾಗೂ ತಾಯಿ ಮೀನಾ ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ತಮ್ಮ ಇಬ್ಬರು ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಸಾಧನೆ ಮಾಡಬೇಕು ಎಂಬುದು ತಂದೆಯ ಕನಸಾಗಿತ್ತು.
ಈ ಘಟನೆ ಸಂಕಷ್ಟದ ಸಂದರ್ಭದಲ್ಲೂ ಧೈರ್ಯ ಮತ್ತು ಮನೋಬಲದಿಂದ ಮುಂದೆ ಸಾಗಿದ ವಿದ್ಯಾರ್ಥಿನಿಯ ದಿಟ್ಟ ನಿರ್ಧಾರಕ್ಕೆ ಉದಾಹರಣೆಯಾಗಿದೆ. ಈಗ ತಾಯಿ ಮತ್ತು ತಂಗಿಯ ಭವಿಷ್ಯದ ಹೊಣೆ ಹೊತ್ತಿರುವ ಶರಣ್ಯ ಮುಂದಿನ ದಿನಗಳಲ್ಲಿ ಎಲ್ಲಾ ಸವಾಲುಗಳನ್ನು ಜಯಿಸಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…