ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy.

ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕುಟುಂಬವನ್ನು ದುಃಖದ ಸಾಗರದಲ್ಲಿ ಮುಳುಗಿಸಿದೆ.

ಇದೇ ವೇಳೆ ಬುಧವಾರ ಶರಣ್ಯಗೆ 10ನೇ ತರಗತಿಯ ಇಂಗ್ಲಿಷ್ ಪರೀಕ್ಷೆ ನಿಗದಿಯಾಗಿತ್ತು. ಒಂದೆಡೆ ತಂದೆಯ ಮರಣದ ನೋವು, ಮತ್ತೊಂದೆಡೆ ಭವಿಷ್ಯ ನಿರ್ಧರಿಸುವ ಪ್ರಮುಖ ಪರೀಕ್ಷೆ—ಈ ಎರಡು ಸಂದರ್ಭಗಳ ನಡುವೆ ಆಕೆ ಗೊಂದಲಕ್ಕೀಡಾದಳು.

ಕುಟುಂಬದವರು, ಶಿಕ್ಷಕರು ಮತ್ತು ಗ್ರಾಮಸ್ಥರು ಧೈರ್ಯ ತುಂಬಿದ ಹಿನ್ನೆಲೆಯಲ್ಲಿ ಶರಣ್ಯ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಳು. ಬಳಿಕ ಮನೆಗೆ ಮರಳಿ ತಂದೆಯ ಅಂತಿಮ ದರ್ಶನ ಪಡೆದಳು.

ತಂದೆ ತಂಗರಾಜ್ ಹಾಗೂ ತಾಯಿ ಮೀನಾ ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ತಮ್ಮ ಇಬ್ಬರು ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಸಾಧನೆ ಮಾಡಬೇಕು ಎಂಬುದು ತಂದೆಯ ಕನಸಾಗಿತ್ತು.

ಈ ಘಟನೆ ಸಂಕಷ್ಟದ ಸಂದರ್ಭದಲ್ಲೂ ಧೈರ್ಯ ಮತ್ತು ಮನೋಬಲದಿಂದ ಮುಂದೆ ಸಾಗಿದ ವಿದ್ಯಾರ್ಥಿನಿಯ ದಿಟ್ಟ ನಿರ್ಧಾರಕ್ಕೆ ಉದಾಹರಣೆಯಾಗಿದೆ. ಈಗ ತಾಯಿ ಮತ್ತು ತಂಗಿಯ ಭವಿಷ್ಯದ ಹೊಣೆ ಹೊತ್ತಿರುವ ಶರಣ್ಯ ಮುಂದಿನ ದಿನಗಳಲ್ಲಿ ಎಲ್ಲಾ ಸವಾಲುಗಳನ್ನು ಜಯಿಸಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 hour ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

15 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

16 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

16 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

17 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago