A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction.
ರಿಪ್ಪನ್ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು ಗುರುತಿಸಲಾಗಿದೆ.
ಮೃತ ಶ್ರೀಜಿತ್ ನಾಯ್ಕ ಅವರಿಗೆ ಮದ್ಯಪಾನ ಮಾಡುವ ಅಭ್ಯಾಸ ಇದ್ದು, ಸುಮಾರು ಮೂರು ವರ್ಷಗಳ ಹಿಂದೆ ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ಜೈಲಿಗೂ ಹೋಗಿ ಬಂದಿದ್ದರೆಂದು ತಿಳಿದುಬಂದಿದೆ. ಈ ಘಟನೆ ಬಳಿಕ ಅವರು ಮಾನಸಿಕವಾಗಿ ಬೇಸರಗೊಂಡು ಹೆಚ್ಚಾಗಿ ಮದ್ಯಪಾನ ಮಾಡುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಮಾರ್ಚ್ 7ರಂದು ರಾತ್ರಿ ಸುಮಾರು 10.30ರ ವೇಳೆ ಮನೆಗೆ ಬಂದಿದ್ದ ಶ್ರೀಜಿತ್ ಅವರಿಗೆ ಊಟ ಮಾಡಲು ತಾಯಿ ಹಾಗೂ ಸಹೋದರರು ಹೇಳಿದಾಗ, “ಊಟ ಮಾಡಿಕೊಂಡಿದ್ದೇನೆ” ಎಂದು ಹೇಳಿ ಮಲಗಿದ್ದರು. ಆದರೆ ಮಾರ್ಚ್ 8ರಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಅವರು ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ, ಮನೆಯ ಮುಂದೆ ಇರುವ ಜಾಗದಲ್ಲಿ ಮರಕ್ಕೆ ಲುಂಗಿಯಿಂದ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಪತ್ತೆಯಾಗಿದೆ.
ಪ್ರೇಮ ಪ್ರಕರಣದಿಂದ ಮನನೊಂದು ಮತ್ತು ಮದ್ಯಪಾನದ ಪರಿಣಾಮವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…