A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction.
ರಿಪ್ಪನ್ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು ಗುರುತಿಸಲಾಗಿದೆ.
ಮೃತ ಶ್ರೀಜಿತ್ ನಾಯ್ಕ ಅವರಿಗೆ ಮದ್ಯಪಾನ ಮಾಡುವ ಅಭ್ಯಾಸ ಇದ್ದು, ಸುಮಾರು ಮೂರು ವರ್ಷಗಳ ಹಿಂದೆ ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ಜೈಲಿಗೂ ಹೋಗಿ ಬಂದಿದ್ದರೆಂದು ತಿಳಿದುಬಂದಿದೆ. ಈ ಘಟನೆ ಬಳಿಕ ಅವರು ಮಾನಸಿಕವಾಗಿ ಬೇಸರಗೊಂಡು ಹೆಚ್ಚಾಗಿ ಮದ್ಯಪಾನ ಮಾಡುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಮಾರ್ಚ್ 7ರಂದು ರಾತ್ರಿ ಸುಮಾರು 10.30ರ ವೇಳೆ ಮನೆಗೆ ಬಂದಿದ್ದ ಶ್ರೀಜಿತ್ ಅವರಿಗೆ ಊಟ ಮಾಡಲು ತಾಯಿ ಹಾಗೂ ಸಹೋದರರು ಹೇಳಿದಾಗ, “ಊಟ ಮಾಡಿಕೊಂಡಿದ್ದೇನೆ” ಎಂದು ಹೇಳಿ ಮಲಗಿದ್ದರು. ಆದರೆ ಮಾರ್ಚ್ 8ರಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಅವರು ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ, ಮನೆಯ ಮುಂದೆ ಇರುವ ಜಾಗದಲ್ಲಿ ಮರಕ್ಕೆ ಲುಂಗಿಯಿಂದ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಪತ್ತೆಯಾಗಿದೆ.
ಪ್ರೇಮ ಪ್ರಕರಣದಿಂದ ಮನನೊಂದು ಮತ್ತು ಮದ್ಯಪಾನದ ಪರಿಣಾಮವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್