SSLC student dies after slipping into a pond near Ripponpet. MLA Belur Gopalakrishna visits the bereaved family, offers condolences, and assures compensation.
ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದ ಗದ್ದೆಯೊಳಗಿನ ಕೆರೆಯಲ್ಲಿ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಮದೀನಾ ಕಾಲೋನಿಯಲ್ಲಿರುವ ಮೃತ ವಿದ್ಯಾರ್ಥಿ ಮಹಮ್ಮದ್ ತಮೀಮ್ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕರು, ಪೋಷಕರಿಗೆ ಧೈರ್ಯ ತುಂಬಿ ದುಃಖ ಹಂಚಿಕೊಂಡರು. ಈ ದುರ್ಘಟನೆಯಿಂದ ತೀವ್ರವಾಗಿ ಕಂಗೆಟ್ಟಿರುವ ಕುಟುಂಬಕ್ಕೆ ತಮ್ಮ ಸಂತಾಪ ಸೂಚಿಸಿದ ಅವರು, ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.
ಘಟನೆಯ ವಿವರಗಳ ಪ್ರಕಾರ, ಶುಕ್ರವಾರ ಪಟ್ಟಣದ ಚೌಡೇಶ್ವರಿ ಬೀದಿಗೆ ಟ್ಯೂಷನ್ಗೆ ತೆರಳಿದ್ದ ತಮೀಮ್, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆದು ಹೋಗುವಾಗ ಕಾಲುಜಾರಿ ನೀರಿಗೆ ಬಿದ್ದಿದ್ದು, ಈ ದುರ್ಘಟನೆ ಸಂಭವಿಸಿದೆ.
ಮೃತರ ಮನೆಯ ಭೇಟಿ ಸಂಧರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಮುಖಂಡರಾದ ಚೇತನ್ ರಾಜ್, ನಿರೂಪ್ ಕುಮಾರ್, ಆಸೀಫ್ ಭಾಷಾ, ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…