An SSLC student tragically died after slipping and falling into a pond in Baruve village near Ripponpet. The incident occurred while he was walking near a खेत bund with friends. Police have registered a case.
ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.
ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದು, ಮೂರು ಪಬ್ಲಿಕ್ ಪರೀಕ್ಷೆಗಳನ್ನೂ ಬರೆದಿದ್ದನು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…