A shocking incident reported from a government school near Heggodu in Sagar taluk of Shivamogga district, where a 7th-grade student was allegedly beaten by teachers, leaving him injured and bleeding. Parents demand strict action and justice.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶಡ್ತಿಕೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ವಿದ್ಯಾರ್ಥಿ ಗಾಯಗೊಂಡಿದ್ದು, ಕೈ ಬೆರಳುಗಳಿಂದ ರಕ್ತ ಹರಿದಿರುವುದಾಗಿ ಪೋಷಕರು ಆರೋಪಿಸಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಸುಶ್ರುತ ಎಂದು ಗುರುತಿಸಲಾಗಿದೆ. ಇದೇ ಶಾಲೆಯ ಸಹಶಿಕ್ಷಕರಾದ ಮೂರ್ತಿ ಬಿ., ಪ್ರಮೋದ್ ಸಣ್ಣಕ್ಕಿ ಹಾಗೂ ಮುಖ್ಯೋಪಾಧ್ಯಾಯ ರಮೇಶ್ ನಾರಾಯಣ್ ಅವರು ಬಾಲಕನ ಮೇಲೆ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.
ಮಾರ್ಚ್ 12 ರಂದು ಬೆಳಿಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಶಾಲೆಯಲ್ಲಿ ನಡೆದ ಕೆಲವು ಘಟನೆಗಳ ಬಗ್ಗೆ ವಿದ್ಯಾರ್ಥಿಯನ್ನೇ ಕಾರಣವೆಂದು ಆರೋಪಿಸಿ, ಶಿಕ್ಷಕರು ಅವನನ್ನು ತರಗತಿ ಕೊಠಡಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಹೊಡೆತದಿಂದ ಬಾಲಕನ ಮೈ ಮೇಲೆ ಬಾಸುಂಡೆಗಳು ಮೂಡಿದ್ದು, ಕೈ ಬೆರಳುಗಳು ಜಜ್ಜಿಕೊಂಡು ರಕ್ತ ಬಂದಿರುವುದಾಗಿ ಹೇಳಲಾಗಿದೆ.
ಘಟನೆ ಬಳಿಕ ಪೋಷಕರು ಬಾಲಕನನ್ನು ವೈದ್ಯರ ಬಳಿ ಕರೆದೊಯ್ಯುತ್ತಿದ್ದಂತೆ, ಅವನಿಗೆ ಸಾಕಷ್ಟು ಪೆಟ್ಟಾಗಿರುವುದರಿಂದ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಘಟನೆಯಿಂದ ಬಾಲಕ ನೋವಿನಿಂದ ನರಳುತ್ತಿರುವುದಾಗಿ ತಿಳಿದುಬಂದಿದೆ. ಬಾಲಕನ ತಂದೆ ಕೃಷ್ಣಮೂರ್ತಿ ಮತ್ತು ತಾಯಿ ಶೈಲಜಾ ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಹಾಗೂ ನ್ಯಾಯ ದೊರಕಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…