ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident.

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ.

ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸುಮಾರು 10:30ರ ವೇಳೆಗೆ ಸನ್ ಕಾನರ್ ಹಕ್ಕಿಗೆ ಚಿಕಿತ್ಸೆ ನೀಡಲು ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ನಂತರ ರಾತ್ರಿ 11:45ರ ಸುಮಾರಿಗೆ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರಿಶೀಲಿಸಲು ಅದರ ಆವರಣದೊಳಗೆ ಪ್ರವೇಶಿಸಿದ ವೇಳೆ, ನೀರಾನೆ ಹಠಾತ್ತಾಗಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ 6:30ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದಾರೆ. ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಘಟನೆಗೆ ಕಾರಣಗಳೇನು, ಸುರಕ್ಷತಾ ಲೋಪಗಳಿದ್ದವೆಯೇ ಎಂಬುದನ್ನು ಪರಿಶೀಲಿಸಿ ಏಳು ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಇದೇ ವೇಳೆ, ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಪಾಲಿಸಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಕಡ್ಡಾಯವಾಗಿ ಜಾರಿಗೊಳಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿ ವನ್ಯಜೀವಿಗಳ ಸಮೀಪ ಕಾರ್ಯನಿರ್ವಹಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಮೃತ ವೈದ್ಯೆಯ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. “ಇದು ಅತ್ಯಂತ ದುಃಖದ ಘಟನೆ. ಸರ್ಕಾರ ಮೃತರ ಕುಟುಂಬದೊಂದಿಗೆ ನಿಂತಿದೆ,” ಎಂದು ಸಚಿವರು ಸಂತಾಪ ಸೂಚಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

8 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

8 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

9 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

20 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

21 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

21 hours ago