Women organized a bike rally to create awareness about road traffic safety, highlighting the importance of responsible driving and public participation in ensuring safer roads.
ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗದ ಬಿವಿಐ ಮಹಿಳೆಯರು ಅರ್ಥಗರ್ಭಿತವಾಗಿ ಆಚರಿಸುತ್ತಿರುವುದು ಖುಷಿ ತಂದಿದೆ ಎಂದು ಶಿವಮೊಗ್ಗ ಎಸ್.ಪಿ. ನಿಖಿಲ್ ಹೇಳಿದರು.
ಶಿವಮೊಗ್ಗದ ಭಾವಸಾರ ವಿಷನ್ ಇಂಡಿಯಾ ಮಹಿಳೆಯರು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತೆಗಾಗಿ ಹೆಲ್ಮೆಟ್ ಕಡ್ಡಾಯ ಎಂಬ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಹರ್ಷ ವ್ಯಕ್ತಪಡಿಸಿದರು.
ಮಹಿಳಾ ದಿನಾಚರಣೆಯನ್ನು ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವುದರ ಮೂಲಕ ಆಚರಿಸುತ್ತಿರುವುದು, ಪೊಲೀಸರ ಕೆಲಸಕ್ಕೆ ಕೈ ಜೋಡಿಸಿದಂತಿದೆ. ಅದರಲ್ಲೂ ಹೆಲ್ಮೆಟ್ ಕಡ್ಡಾಯವಾಗಿ ಎಲ್ಲಾ ವಾಹನ ಸವಾರರು ಧರಿಸಲೇಬೇಕಾಗಿದ್ದು, ಹಿಂದೆ ಕೂರುವವರು ಕೂಡ ಧರಿಸಲೇಬೇಕು. ನಿಮಗಾಗಿ ಅಲ್ಲದೇ, ನಿಮ್ಮ ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು ಸೂಕ್ತ ಎಂದರು. ನಿಮ್ಮ ಈ ಜನ ಜಾಗೃತಿ ರ್ಯಾಲಿ ನೋಡಿಯಾದರೂ, ಇತರರು ಹೆಲ್ಮೆಟ್ ಧರಿಸುವಂತಾಗಲಿ ಎಂದು ಹಾರೈಸಿದರು.
ಬೈಕ್ ರ್ಯಾಲಿ ಶಿವಮೊಗ್ಗ ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿ ಫ್ರೀಡಂ ಪಾರ್ಕ್ ನಲ್ಲಿ ಸಮಾರೋಪಗೊಂಡಿತು. ಸಮಾರೋಪ ಸಮಾರಂಭದಲ್ಲಿ ಬಿವಿಐ ಮಹಿಳೆಯರಿಗೆ ಹಾಗೂ ನೆರೆದಿದ್ದವರಿಗೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಪ್ನಾ, ಸುರಕ್ಷಿತ ಸಂಚಾರ ನಿಯಮಗಳ ಪಾಲನೆ ಬಗ್ಗೆ ಮಾಹಿತಿ ನೀಡಿದರು. ಸುಮಾರು ೬೦ ಕ್ಕೂ ಹೆಚ್ಚು ಮಹಿಳೆಯರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಬಿವಿಐ ಅಧ್ಯಕ್ಷ ಡಿ.ಪಿ. ಕಮಲಾಕರ್, ಕಾರ್ಯದರ್ಶಿ ಚೇತನಾ ಅಂಬೋರೆ, ಖಜಾಂಚಿ ಲತಾ ಬೇದ್ರೆ, ಮಹಿಳಾ ಕಲ್ಯಾಣ ನಿರ್ದೇಶಕಿ ಜಾಹ್ನವಿ, ವಾಣಿ, ಮಮತಾ, ಕೋಮಲ್, ಪ್ರಭಾಕರ್ ವಂಡ್ಕರ್, ವಿನಯ್ ಸೇರಿದಂತೆ ಸಂಸ್ಥೆಯ ನಿರ್ದೇಶಕರು ಸದಸ್ಯರು ಉಪಸ್ಥಿತರಿದ್ದರು.
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…