Headlines

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

A pedestrian was killed after being hit by a speeding bike in Anandapura, Sagara taluk. The victim, Shekharappa, succumbed to injuries despite treatment. Police have registered a case and are searching for the absconding rider.

ಆನಂದಪುರ: ಸಾಗರ ತಾಲೂಕಿನ ಆನಂದಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ತೋಳಿಕಲ್ ನಿವಾಸಿ ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ.

ಆನಂದಪುರದ ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಶೇಖರಪ್ಪ ನಡೆದುಕೊಂಡು ಹೋಗುತ್ತಿದ್ದ ವೇಳೆ, ಅತೀ ವೇಗದಲ್ಲಿ ಬಂದ ಅಪರಿಚಿತ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಶೇಖರಪ್ಪ ಅವರಿಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವ ಉಂಟಾಗಿದೆ.

ತಕ್ಷಣವೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಬೈಕ್ ಸವಾರ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಸವಾರನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

About The Author