ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು
A 21-year-old youth died after food got stuck in his throat during a birthday party feast in Chennahalli near Kumsi. Police have registered a case and investigation is underway.
ಕುಂಸಿ: ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಔತಣ ಕೂಟವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತನನ್ನು 21 ವರ್ಷದ ಸಚಿನ್ ಎಂದು ಗುರುತಿಸಲಾಗಿದೆ.
ಗ್ರಾಮದ ನಿವಾಸಿಯೊಬ್ಬರ ಹುಟ್ಟುಹಬ್ಬದ ಪ್ರಯುಕ್ತ ಗ್ರಾಮದ ಹೊರವಲಯದಲ್ಲಿರುವ ನಿರ್ಮಾಣ ಹಂತದ ಮನೆಯ ಬಳಿ ನಾನ್ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಊಟದಲ್ಲಿ ಭಾಗವಹಿಸಿದ್ದ ಸಚಿನ್, ಊಟ ಮುಗಿದ ಬಳಿಕ ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡದೊಳಗೆ ತೆರಳಿದ್ದನು. ನಂತರ ಉಳಿದವರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ.
ಶುಕ್ರವಾರ ಬೆಳಿಗ್ಗೆ ಕಾಮಗಾರಿ ಮುಂದುವರಿಸಲು ಬಂದ ಕಾರ್ಮಿಕರು ಸಚಿನ್ ಶವವಾಗಿ ಬಿದ್ದಿರುವುದನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಕುಟುಂಬದವರು ಶವವನ್ನು ಶಿವಮೊಗ್ಗ ನಗರಕ್ಕೆ ಕೊಂಡೊಯ್ದರು.
ಈ ಕುರಿತು ಮಾಹಿತಿ ಪಡೆದ ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆಯಲ್ಲಿ ಸಚಿನ್ ಮದ್ಯಪಾನ ಮಾಡಿದ್ದನು ಮತ್ತು ಗಂಟಲಲ್ಲಿ ಆಹಾರ ಸಿಲುಕಿಕೊಂಡಿರುವುದೇ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…