ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು
A 21-year-old youth died after food got stuck in his throat during a birthday party feast in Chennahalli near Kumsi. Police have registered a case and investigation is underway.
ಕುಂಸಿ: ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಔತಣ ಕೂಟವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತನನ್ನು 21 ವರ್ಷದ ಸಚಿನ್ ಎಂದು ಗುರುತಿಸಲಾಗಿದೆ.
ಗ್ರಾಮದ ನಿವಾಸಿಯೊಬ್ಬರ ಹುಟ್ಟುಹಬ್ಬದ ಪ್ರಯುಕ್ತ ಗ್ರಾಮದ ಹೊರವಲಯದಲ್ಲಿರುವ ನಿರ್ಮಾಣ ಹಂತದ ಮನೆಯ ಬಳಿ ನಾನ್ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಊಟದಲ್ಲಿ ಭಾಗವಹಿಸಿದ್ದ ಸಚಿನ್, ಊಟ ಮುಗಿದ ಬಳಿಕ ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡದೊಳಗೆ ತೆರಳಿದ್ದನು. ನಂತರ ಉಳಿದವರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ.
ಶುಕ್ರವಾರ ಬೆಳಿಗ್ಗೆ ಕಾಮಗಾರಿ ಮುಂದುವರಿಸಲು ಬಂದ ಕಾರ್ಮಿಕರು ಸಚಿನ್ ಶವವಾಗಿ ಬಿದ್ದಿರುವುದನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಕುಟುಂಬದವರು ಶವವನ್ನು ಶಿವಮೊಗ್ಗ ನಗರಕ್ಕೆ ಕೊಂಡೊಯ್ದರು.
ಈ ಕುರಿತು ಮಾಹಿತಿ ಪಡೆದ ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆಯಲ್ಲಿ ಸಚಿನ್ ಮದ್ಯಪಾನ ಮಾಡಿದ್ದನು ಮತ್ತು ಗಂಟಲಲ್ಲಿ ಆಹಾರ ಸಿಲುಕಿಕೊಂಡಿರುವುದೇ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…