ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ

Fire and Emergency Services Department conducted a fire safety awareness campaign in Hosanagar as part of Fire Service Week, educating the public on preventive measures, LPG safety, and emergency response during fire accidents.

ಹೊಸನಗರ: ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ತಾಲೂಕಿನ ವಿವಿಧ ಭಾಗಗಳಲ್ಲಿ ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಅಗ್ನಿಶಾಮಕ ಠಾಣೆಯಲ್ಲಿ ಹುತಾತ್ಮ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ನಂತರ ಹೊಸನಗರ ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಸಾರ್ವಜನಿಕರನ್ನು ಒಗ್ಗೂಡಿಸಿ, ಅಗ್ನಿ ಅವಘಡಗಳ ಸಂದರ್ಭದಲ್ಲಿನ ಮುಂಜಾಗ್ರತಾ ಕ್ರಮಗಳು ಹಾಗೂ ಸುರಕ್ಷತಾ ವಿಧಾನಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಯಿತು.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ 2016ನೇ ಸಾಲಿನ ಧ್ಯೇಯ ವಾಕ್ಯವಾದ ‘ಅಗ್ನಿ ದುರ್ಘಟನೆ ತಡೆಯೋಣ, ರಾಷ್ಟ್ರದ ಪ್ರಗತಿ ಹೆಚ್ಚಿಸೋಣ’ ಎಂಬ ಸಂದೇಶದಡಿ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಕರಪತ್ರಗಳನ್ನು ಹಂಚಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹೊಸನಗರ ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಅವರು ಎಲ್‌ಪಿಜಿ ಸಿಲಿಂಡರ್‌ಗಳ ಸುರಕ್ಷಿತ ಬಳಕೆ, ಅಗ್ನಿ ನಂದಕಗಳ ವಿಧಗಳು ಹಾಗೂ ಅವುಗಳನ್ನು ಸರಿಯಾಗಿ ಉಪಯೋಗಿಸುವ ವಿಧಾನಗಳ ಕುರಿತು ವಿವರಿಸಿದರು. ಅಲ್ಲದೆ ಪಟ್ಟಣದ ಹೋಟೆಲ್‌ಗಳು, ಅಂಗಡಿಗಳು ಮತ್ತು ಪೆಟ್ರೋಲ್ ಬಂಕ್‌ಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಅಗ್ನಿ ಅವಘಡ ಸಂಭವಿಸಿದಾಗ ಆತಂಕಕ್ಕೆ ಒಳಗಾಗದೆ, ಶಾಂತಚಿತ್ತದಿಂದ ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸುವಂತೆ ನಾಗರಿಕರಿಗೆ ಸಲಹೆ ನೀಡಿದರು.

ಈ ಜಾಗೃತಿ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ಕೆ.ಟಿ. ರಾಜಪ್ಪ, ರಾಜೇಶ್ ಕೆ.ಹೆಚ್, ಜೆ. ರವಿ, ಸುರೇಶ್ ಗೌಡ ಸಿ. ಪಾಟೀಲ್, ನರೇಶ್ ಎಸ್. ಕಾರ್ವಿ, ಪ್ರವೀಣ್ ಕುಮಾರ್ ಬಿ, ರವೀಂದ್ರ ಕೆ, ಶಿವರಾಜ್, ಮಂಜುನಾಥ್ ಬಿ, ಆಂಜನೇಯ ಬಿ.ಸಿ, ಅಸ್ಪಕ್ ಬಿ, ಮಧು ಎಚ್ ಹಾಗೂ ಶಿಕ್ಷಕರಾದ ಮಂಜುನಾಥ್ ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

19 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

21 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago