ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ

Janahita Ranga state coordinator Watagodu Suresh questions national party leaders over protests demanding Hosanagara constituency formation, calling the movement politically motivated.

ರಿಪ್ಪನ್ ಪೇಟೆ: ಸರ್ಕಾರದಲ್ಲಿ ಶಾಸನ ರೂಪಿಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪಕ್ಷಗಳ ನಾಯಕರು ಹೊಸನಗರ ಕ್ಷೇತ್ರ ರಚನೆ ವಿಷಯದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದು ಆಶ್ಚರ್ಯಕರ ಬೆಳವಣಿಗೆಯಾಗಿದೆ ಎಂದು ಜನಹಿತ ರಂಗದ ರಾಜ್ಯ ಸಂಚಾಲಕ ವಾಟಗೋಡು ಸುರೇಶ್ ಅಭಿಪ್ರಾಯಪಟ್ಟರು.

ಗ್ರಾಮ ಪಂಚಾಯಿತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸನಗರ–ರಿಪ್ಪನ್‌ಪೇಟೆ ಭಾಗದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ರಾಷ್ಟ್ರೀಯ ನಾಯಕರ ಗಮನ ಸೆಳೆಯುವ ಪ್ರಭಾವಿಗಳಿದ್ದಾರೆ. ಎರಡೂ ಪಕ್ಷಗಳು ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವಾಗ ಕ್ಷೇತ್ರ ಉಳಿಸುವ ಹೋರಾಟವನ್ನು ಅಧಿಕಾರದಲ್ಲಿರುವ ನಾಯಕರೇ ನಡೆಸುತ್ತಿರುವುದು ಪ್ರಶ್ನಾರ್ಹವಾಗಿದೆ. ಈ ಹೋರಾಟ ಯಾರ ವಿರುದ್ಧ ಎಂಬುದನ್ನು ಜನತೆಗೆ ಸ್ಪಷ್ಟಪಡಿಸಬೇಕು ಎಂದು ಹೇಳಿದರು.

ಕ್ಷೇತ್ರ ಪುನರ್‌ವಿಂಗಡಣೆ ರಾಷ್ಟ್ರ ಮಟ್ಟದ ನಿಯಮವಾಗಿದ್ದು, ಸ್ಥಳೀಯ ಬೇಡಿಕೆ ಆಧಾರದಲ್ಲಿ ರಾಜ್ಯದಲ್ಲಿ ಹೊಸ ಕ್ಷೇತ್ರ ರಚನೆ ಸಾಧ್ಯವಿಲ್ಲ. ಈ ಸಂಬಂಧ ಯಾವುದೇ ವಿಧೇಯಕವೂ ಲೋಕಸಭೆಯಲ್ಲಿ ಮಂಡನೆಯಾಗಿಲ್ಲ. ಆದರೂ ಕೆಲವರು ರಾಜಕೀಯ ಅಸ್ತಿತ್ವಕ್ಕಾಗಿ ಅವಸರದ ನಡೆ ತಾಳುತ್ತಿದ್ದಾರೆ. ದೆಹಲಿಯಲ್ಲಿ ನಿರ್ಧಾರವಾಗುವ ವಿಷಯವನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸುವುದು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಜನರನ್ನು ತಪ್ಪು ದಾರಿಗೆಳೆದು ಗೊಂದಲ ಸೃಷ್ಟಿಸುವ ಪ್ರಯತ್ನಗಳನ್ನು ತಪ್ಪಿಸಬೇಕು. ತಾಲ್ಲೂಕಿನಲ್ಲಿ ಮುಳಗಡೆ, ಬಗರ್ ಹುಕುಂ, ವಿದ್ಯುತ್ ಹಾಗೂ ಅರಣ್ಯ ಭೂಮಿ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳಿವೆ. ಇವುಗಳಿಗೆ ಪರಿಹಾರ ಕಂಡುಹಿಡಿಯಲು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಕ್ಷೇತ್ರದ ಅಸ್ತಿತ್ವದ ಅಗತ್ಯವನ್ನು ನಾವು ಬೆಂಬಲಿಸುತ್ತೇವೆ. ಆದರೆ ಅಗತ್ಯ ಸಮಯದಲ್ಲಿ ಮೌನವಾಗಿ ಇದ್ದು, ನಂತರ ಅಪ್ರಸ್ತುತ ಸಂದರ್ಭದಲ್ಲಿ ಹೋರಾಟ ನಡೆಸುವುದು ಅರ್ಥಹೀನವಾಗಿದೆ ಎಂದು ಸುರೇಶ್ ಟೀಕಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯ ಅಮ್ಮಿರ್ ಹಂಜಾ ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago