ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.


“ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ” ಎಂದು ಪ್ರಾರ್ಥಿಸಿರುವ ಮುಖ್ಯಮಂತ್ರಿ, ಘಟನೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದಿರುವುದಾಗಿ ತಿಳಿಸಿದ್ದಾರೆ.

ಈ ದುರ್ಘಟನೆಗೆ ಸಂಬಂಧಿಸಿದಂತೆ ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿರುವುದು ನೋವಿನ ಸಂಗತಿ ಎಂದು ಅವರು ತಿಳಿಸಿದ್ದಾರೆ.

ಇನ್ನು, ಶಿವಮೊಗ್ಗ ಸಮೀಪದ ಹುಲಿಕಲ್ ಘಾಟಿಯಲ್ಲಿ ನಡೆದ ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಜಾರಿದ ಪರಿಣಾಮ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೃತರನ್ನು ರಾಘವೇಂದ್ರ (37), ತಂದೆ ಕೃಷ್ಣಮೂರ್ತಿ, ವಾಸ ಚಕ್ಕಾರು ನಗರ, ಹೊಸನಗರ ತಾಲ್ಲೂಕು; ರಾಜು (30), ವಾಸ ನೀಲವಗಲ್ಲು, ಹಾವೇರಿ ತಾಲ್ಲೂಕು; ಹಾಗೂ ಶಬ್ಬೀರ್ (40), ವಾಸ ನೆಲವಗಲ್ಲು ಎಂದು ಗುರುತಿಸಲಾಗಿದೆ. ಮೃತರ ಕುಟುಂಬಗಳಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಇದೇ ಘಟನೆಯಲ್ಲಿ ಸುಮಂತ, ಪರಮೇಶ್, ಸಚಿನ್ ಮತ್ತು ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದು, ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

2 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

2 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

5 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

5 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

2 days ago