ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು
A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡ ಬಡ ಕುಟುಂಬವೊಂದನ್ನು ಸಂಕಷ್ಟಕ್ಕೆ ದೂಡಿದೆ.
ಹುಂಚ ಗ್ರಾಮದ ಮಠದಜಡ್ಡು ಸಮೀಪದಲ್ಲಿರುವ ಸುಮಿತ್ರಾ ಎಂಬವರ ಮನೆಯಲ್ಲಿ ಭಾನುವಾರ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಭಾರೀ ಅಗ್ನಿಯಾಗಿ ವ್ಯಾಪಿಸಿ, ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಘಟನೆಯ ವೇಳೆಯಲ್ಲಿ ಮನೆಯಲ್ಲಿ ಇದ್ದವರು ತಕ್ಷಣ ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು, ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ತಕ್ಷಣ ಸ್ಪಂದಿಸಿ ನೀರು ಮತ್ತು ಇತರ ಸೌಲಭ್ಯಗಳಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಆದರೆ ಅಗ್ನಿಶಾಮಕ ದಳ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸದಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳಿಕ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಿದರು.
ಈ ಘಟನೆದಿಂದ ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾದ ಮನೆಯ ಮಾಲಕಿ ಸುಮಿತ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಭಾಗ್ಯವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂಬುದು ಸಮಾಧಾನಕರ ಸಂಗತಿ.
ಇನ್ನು ಬೆಂಕಿಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಕಾರಣಗಳ ಬಗ್ಗೆ ಶಂಕೆ ವ್ಯಕ್ತವಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…