ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು
A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡ ಬಡ ಕುಟುಂಬವೊಂದನ್ನು ಸಂಕಷ್ಟಕ್ಕೆ ದೂಡಿದೆ.
ಹುಂಚ ಗ್ರಾಮದ ಮಠದಜಡ್ಡು ಸಮೀಪದಲ್ಲಿರುವ ಸುಮಿತ್ರಾ ಎಂಬವರ ಮನೆಯಲ್ಲಿ ಭಾನುವಾರ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಭಾರೀ ಅಗ್ನಿಯಾಗಿ ವ್ಯಾಪಿಸಿ, ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಘಟನೆಯ ವೇಳೆಯಲ್ಲಿ ಮನೆಯಲ್ಲಿ ಇದ್ದವರು ತಕ್ಷಣ ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು, ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ತಕ್ಷಣ ಸ್ಪಂದಿಸಿ ನೀರು ಮತ್ತು ಇತರ ಸೌಲಭ್ಯಗಳಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಆದರೆ ಅಗ್ನಿಶಾಮಕ ದಳ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸದಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳಿಕ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಿದರು.
ಈ ಘಟನೆದಿಂದ ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾದ ಮನೆಯ ಮಾಲಕಿ ಸುಮಿತ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಭಾಗ್ಯವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂಬುದು ಸಮಾಧಾನಕರ ಸಂಗತಿ.
ಇನ್ನು ಬೆಂಕಿಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಕಾರಣಗಳ ಬಗ್ಗೆ ಶಂಕೆ ವ್ಯಕ್ತವಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…